Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
Categories: | Indian Regional Languages, Kannada |
---|
Related products
-
Kempu Kanagile and Chitra
Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Gombi Maduvi
Author: Revati Nadgir
ಉತ್ತರ ಕರ್ನಾಟಕದ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಈ ಕೃತಿಯಲ್ಲಿ ಬಡ, ಮುಗ್ಧ ಹುಡುಗಿಯೊಬ್ಬಳ ಕನಸುಗಳು, ಮಾನವೀಯತೆಯನ್ನು ಮೆರೆಯುವ ಹಲವು ಪಾತ್ರಗಳ ನಡುವೆ ವಿಧಿಯ ಕೈವಾಡದಿಂದ ಚದುರಿ ಹೋಗುವ, ಅಂತಃಕರಣವನ್ನು ಕಲಕುವ ಚಿತ್ರಣವಿದೆ. ಸ್ಥಳೀಯ ನಂಬಿಕೆ-ಆಚರಣೆ, ಆಶೋತ್ತರಗಳನ್ನು ದಟ್ಟವಾಗಿ ಹೆಣೆದುಕೊಳ್ಳುತ್ತ ಒಂದು ಪುಟ್ಟ ವಿಶ್ವವನ್ನೇ ಈ ನಾಟಕ ಸೃಷ್ಟಿಸುತ್ತದೆ. ರೇವತಿ ನಾಡಗೀರ ಅವರ ಚೊಚ್ಚಲ ಕೃತಿಯಾದ ಇದರಲ್ಲಿ, ಅವರ ಸಹೃದಯತೆ, ಉತ್ತರ ಕರ್ನಾಟಕದ ಸಂಸ್ಕೃತಿಯ ಅನುಭವ ಎದ್ದು ಕಾಣುತ್ತದೆ.
Interested customers may write to us at mup@manipal.edu about purchasing the book.
Also available on
-
Grama Sannidhya
ಗ್ರಾಮ ಸಾನ್ನಿಧ್ಯAuthor: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Bhagavantana Kandammagalu
Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on
-
Saamajika Samanvayada Harikara – Kanaka Dasaru
Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Daddal Kaadina Mouna
Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
Madhavi Kathana Kavya
Author: ONV Kurup Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on
-
Puttakkana Highway
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.