-
Pu Shri Sanskriti Sampada
₹850.00Author: Prabhakar Joshi and Pu Guruprasad Bhat
ಕನ್ನಡನಾಡಿನ ವಿಶಿಷ್ಟ, ಬಹುಶ್ರುತ ವಿದ್ವಾಂಸ ಪು. ಶ್ರೀನಿವಾಸ ಭಟ್ಟ [೧೯೩೯-೨೦೧೧] ಅವರ ಸಂಸ್ಕೃತಿಯ ಕುರಿತ ಲೇಖನಗಳ ಸಂಕಲನವಿದು. ನಿಶ್ಚಿತ ನಿರ್ವಚನಕ್ಕೆ ಸಿಗದ ಅಸಾಮಾನ್ಯ ವಿಸ್ತಾರ, ವೈವಿಧ್ಯ ಮತ್ತು ಅರಿವಿನ ಆಗರವಾಗಿದ್ದ ಪು. ಶ್ರೀ. ಅವರು ಎಲ್ಲ ಅರ್ಥಗಳಲ್ಲಿ ‘ದೇಸಿ’ ಪರಂಪರೆಯ ಘನ ಪಂಡಿತರು. ಇತಿಹಾಸ, ತುಳುಸಂಸ್ಕೃತಿ. ಯಕ್ಷಗಾನ, ಹಳಗನ್ನಡ, ಜಾನಪದ ವಸ್ತು-ಸಂಗತಿ, ನಂಬಿಕೆ-ನಡವಳಿಕೆ, ವ್ಯಕ್ತಿ-ವಿಷಯ- ಇಂಥ ವಿಷಯಗಳಲ್ಲಿ ತಲಸ್ಪರ್ಶಿ ಅನುಭವವಿದ್ದ ಅವರ ವಿಶ್ಲೇಷಣೆ, ನಿರೂಪಣ ಶೈಲಿ ಅನ್ಯತ್ರ ದುರ್ಲಭ ಎಂಬಷ್ಟು ಅನನ್ಯ.
ಅವರ ಬರಹಗಳ ಶಿರೋನಾಮೆಗಳ ಅವುಗಳ ವೈಶಿಷ್ಟ್ಯವನ್ನು ಹೇಳುತ್ತವೆ- ತೊಟ್ಟಿಲುಗಳು, ಮುಳ್ಳುಗಳು, ಕೋಣೆಗಳು, ಬಾವಿಗಳು, ಗುಡ್ಡಗಳು, ಕೊಡೆಗಳು, ತಿಂಡಿಗಳು, ಪ್ರಸಾದ ವೈವಿಧ್ಯ, ಹೂಮಾಲೆ, ತೋಡು-ಗುಂರ್ಪೆ-ಮದಕ, ದಾರಿಗಳು, ಯಕ್ಷಗಾನ ಪ್ರಸಂಗಗಳು, ಪ್ರಸಂಗ ಸಾಹಿತ್ಯ ಸಮೀಕ್ಷೆ, ಸತ್ಯಪರೀಕ್ಷೆಯ ವಿಧಾನಗಳು, ನಿಷೇಧ ಮತ್ತು ಪರಿಹಾರ, ಬೇಸಾಯದ ನುಡಿತಗಳು, ಕ್ಷೇತ್ರ ವೃತ್ತಾಂತಗಳು, ಜಾತ್ರೆಗಳು, ಆಳುಪ ವಂಶ, ದಕ್ಷಿಣಕನ್ನಡದಲ್ಲಿ ವೀರ ಶೈವ ಧರ್ಮ, ಶಿಲಾಶಾಸನ ವಿವರ- ಇತ್ಯಾದಿ.ಪಾರಂಪರಿಕ ನೋಟ ಮತ್ತು ಆಧುನಿಕ ಸಂಶೋಧಕನ ದೃಷ್ಟಿಗಳ ಸಮನ್ವಯ, ತುಂಬ ಸರಳ-ಸುಲಭ ರೀತಿಯ ನಿರೂಪಣೆ, ತಪಸ್ಸಿನಂಥ ದೀರ್ಘಕಾಲದ ಅಧ್ಯಯನ, ಸೂಕ್ಷ್ಮ ಪರಿಶೀಲನ, ನೈಜ ಸಂಸ್ಕೃತಿ ಪ್ರೇಮದ ಒಳನೋಟಗಳು- ಇವೆಲ್ಲವನ್ನು ಗಮನಿಸಿದರೆ ಇವು ಕನ್ನಡ ಸಾರಸತ್ವ ಲೋಕಕ್ಕೆ ವಿಶೇಷವಾದ ಕೊಡುಗೆಯೆ ಸರಿ.ಪದಪದವಿಗಳ ಯೋಚನೆ ಇಲ್ಲದೆ, ಸ್ವಂತ ಆಸಕ್ತಿಯಿಂದ ಗ್ರಂಥ ಸಂಗ್ರಹ ಮಾಡಿ, ಕೇತ್ರಕಾರ್ಯದಲ್ಲಿಯೂ ತೊಡಗಿಕೊಂಡು ಸುಮಾರು ಆರು ದಶಕಗಳ ಕಾಲ ‘ಬರಿಗಾಲ ಸಂಶೋಧಕ’ನಾಗಿ [ಬ್ಯಾರ್ಫೂಟ್ ರಿಸರ್ಚರ್] ಕ್ರಿಯಾಶೀಲರಾಗಿದ್ದವರು. ಅಧ್ಯಾಪಕ ವೃತ್ತಿಯಿಂದ ಬಂದ ವೇತನದ ದೊಡ್ಡ ಭಾಗವನ್ನು ಅಧ್ಯಯನ ಸಂಪನ್ಮೂಲಗಳ ಸಂಗ್ರಹಕ್ಕೆ ವ್ಯಯಿಸಿದವರು. ಒಬ್ಬ ಶಾಲಾಮಾಸ್ತರನಾಗಿ ಸಂಶೋಧನೆಯ ದೃಷ್ಟಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರ ಮಟ್ಟದÀ ಸಾಧನೆ ಮಾಡಿದವರು. ಅನೇಕ ಸಂಶೋಧಕರಿಗೆ ಜಿಜ್ಞಾಸುಗಳಿಗೆ ಮಾರ್ಗದರ್ಶನ ಗ್ರಂಥ ಸಹಾಯ ಮಾಡಿದರು ಅವರ ಅಪ್ರಕಟಿತ ಬರಹಗಳ ಸಂಪುಟವು ಅಧ್ಯಯನ ಆಸಕ್ತರಿಗೆ ಒಂದು ಅಮುಲ್ಯ ಆಕಾರ ಗ್ರಂಥವೆನಿಸಲಿದೆ. -
Mahāmmāyi
₹195.00Author: Chandrasekhara Kambara, Translator: Kathyayini Kunjibettu
Mahāmmāyi is the story of the legend of Shatavithaayi – the Goddess of death, and her adopted son Sambhashiva. Out of affection for her son, Goddess Shatavithaayi blesses him with the “power of life”. The blessing was that death will evade the people who are treated by Sambashiva. But a certain condition set by Shatavithaayi forbade him from healing every ill man. The condition was that, if Shatavithaayi stood on the right side of the patient, Sambhashiva could treat that person and he would live; but, if she stood on the left side of the patient, he should not treat that person as his death was inevitable. Through a distinct method of story-telling, the story follows the life of Sambhashiva as he begins to question the ideas of fate and destiny. Thus, the conflict between fate and human efforts to change that fate is vividly described in this play.


