-
Pu Shri Sanskriti Sampada
₹850.00Author: Prabhakar Joshi and Pu Guruprasad Bhat
ಕನ್ನಡನಾಡಿನ ವಿಶಿಷ್ಟ, ಬಹುಶ್ರುತ ವಿದ್ವಾಂಸ ಪು. ಶ್ರೀನಿವಾಸ ಭಟ್ಟ [೧೯೩೯-೨೦೧೧] ಅವರ ಸಂಸ್ಕೃತಿಯ ಕುರಿತ ಲೇಖನಗಳ ಸಂಕಲನವಿದು. ನಿಶ್ಚಿತ ನಿರ್ವಚನಕ್ಕೆ ಸಿಗದ ಅಸಾಮಾನ್ಯ ವಿಸ್ತಾರ, ವೈವಿಧ್ಯ ಮತ್ತು ಅರಿವಿನ ಆಗರವಾಗಿದ್ದ ಪು. ಶ್ರೀ. ಅವರು ಎಲ್ಲ ಅರ್ಥಗಳಲ್ಲಿ ‘ದೇಸಿ’ ಪರಂಪರೆಯ ಘನ ಪಂಡಿತರು. ಇತಿಹಾಸ, ತುಳುಸಂಸ್ಕೃತಿ. ಯಕ್ಷಗಾನ, ಹಳಗನ್ನಡ, ಜಾನಪದ ವಸ್ತು-ಸಂಗತಿ, ನಂಬಿಕೆ-ನಡವಳಿಕೆ, ವ್ಯಕ್ತಿ-ವಿಷಯ- ಇಂಥ ವಿಷಯಗಳಲ್ಲಿ ತಲಸ್ಪರ್ಶಿ ಅನುಭವವಿದ್ದ ಅವರ ವಿಶ್ಲೇಷಣೆ, ನಿರೂಪಣ ಶೈಲಿ ಅನ್ಯತ್ರ ದುರ್ಲಭ ಎಂಬಷ್ಟು ಅನನ್ಯ.
ಅವರ ಬರಹಗಳ ಶಿರೋನಾಮೆಗಳ ಅವುಗಳ ವೈಶಿಷ್ಟ್ಯವನ್ನು ಹೇಳುತ್ತವೆ- ತೊಟ್ಟಿಲುಗಳು, ಮುಳ್ಳುಗಳು, ಕೋಣೆಗಳು, ಬಾವಿಗಳು, ಗುಡ್ಡಗಳು, ಕೊಡೆಗಳು, ತಿಂಡಿಗಳು, ಪ್ರಸಾದ ವೈವಿಧ್ಯ, ಹೂಮಾಲೆ, ತೋಡು-ಗುಂರ್ಪೆ-ಮದಕ, ದಾರಿಗಳು, ಯಕ್ಷಗಾನ ಪ್ರಸಂಗಗಳು, ಪ್ರಸಂಗ ಸಾಹಿತ್ಯ ಸಮೀಕ್ಷೆ, ಸತ್ಯಪರೀಕ್ಷೆಯ ವಿಧಾನಗಳು, ನಿಷೇಧ ಮತ್ತು ಪರಿಹಾರ, ಬೇಸಾಯದ ನುಡಿತಗಳು, ಕ್ಷೇತ್ರ ವೃತ್ತಾಂತಗಳು, ಜಾತ್ರೆಗಳು, ಆಳುಪ ವಂಶ, ದಕ್ಷಿಣಕನ್ನಡದಲ್ಲಿ ವೀರ ಶೈವ ಧರ್ಮ, ಶಿಲಾಶಾಸನ ವಿವರ- ಇತ್ಯಾದಿ.ಪಾರಂಪರಿಕ ನೋಟ ಮತ್ತು ಆಧುನಿಕ ಸಂಶೋಧಕನ ದೃಷ್ಟಿಗಳ ಸಮನ್ವಯ, ತುಂಬ ಸರಳ-ಸುಲಭ ರೀತಿಯ ನಿರೂಪಣೆ, ತಪಸ್ಸಿನಂಥ ದೀರ್ಘಕಾಲದ ಅಧ್ಯಯನ, ಸೂಕ್ಷ್ಮ ಪರಿಶೀಲನ, ನೈಜ ಸಂಸ್ಕೃತಿ ಪ್ರೇಮದ ಒಳನೋಟಗಳು- ಇವೆಲ್ಲವನ್ನು ಗಮನಿಸಿದರೆ ಇವು ಕನ್ನಡ ಸಾರಸತ್ವ ಲೋಕಕ್ಕೆ ವಿಶೇಷವಾದ ಕೊಡುಗೆಯೆ ಸರಿ.ಪದಪದವಿಗಳ ಯೋಚನೆ ಇಲ್ಲದೆ, ಸ್ವಂತ ಆಸಕ್ತಿಯಿಂದ ಗ್ರಂಥ ಸಂಗ್ರಹ ಮಾಡಿ, ಕೇತ್ರಕಾರ್ಯದಲ್ಲಿಯೂ ತೊಡಗಿಕೊಂಡು ಸುಮಾರು ಆರು ದಶಕಗಳ ಕಾಲ ‘ಬರಿಗಾಲ ಸಂಶೋಧಕ’ನಾಗಿ [ಬ್ಯಾರ್ಫೂಟ್ ರಿಸರ್ಚರ್] ಕ್ರಿಯಾಶೀಲರಾಗಿದ್ದವರು. ಅಧ್ಯಾಪಕ ವೃತ್ತಿಯಿಂದ ಬಂದ ವೇತನದ ದೊಡ್ಡ ಭಾಗವನ್ನು ಅಧ್ಯಯನ ಸಂಪನ್ಮೂಲಗಳ ಸಂಗ್ರಹಕ್ಕೆ ವ್ಯಯಿಸಿದವರು. ಒಬ್ಬ ಶಾಲಾಮಾಸ್ತರನಾಗಿ ಸಂಶೋಧನೆಯ ದೃಷ್ಟಿಯಲ್ಲಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರ ಮಟ್ಟದÀ ಸಾಧನೆ ಮಾಡಿದವರು. ಅನೇಕ ಸಂಶೋಧಕರಿಗೆ ಜಿಜ್ಞಾಸುಗಳಿಗೆ ಮಾರ್ಗದರ್ಶನ ಗ್ರಂಥ ಸಹಾಯ ಮಾಡಿದರು ಅವರ ಅಪ್ರಕಟಿತ ಬರಹಗಳ ಸಂಪುಟವು ಅಧ್ಯಯನ ಆಸಕ್ತರಿಗೆ ಒಂದು ಅಮುಲ್ಯ ಆಕಾರ ಗ್ರಂಥವೆನಿಸಲಿದೆ. -
Dodda Samagara Nalmoga
₹350.00Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.


