ಶಶಿರಾಜ್ ಕಾವೂರು ವೃತ್ತಿಯಲ್ಲಿ ಸಿವಿಲ್ ಮತ್ತು ಕ್ರಿಮಿನಲ್ ನ್ಯಾಯವಾದಿ. ಪ್ರವೃತ್ತಿಯಲ್ಲಿ
ನಟ, ನಿರ್ದೇಶಕ, ಸಾಹಿತಿ, ಕನ್ನಡ ಹಾಗೂ ತುಳು ಭಾಷೆಗಳಲ್ಲಿ ನಾಟಕ, ಮಕ್ಕಳ ನಾಟಕ,
ಕಾದಂಬರಿ, ಕವನ ಸಂಕಲನಗಳನ್ನು ಬರೆದಿದ್ದಾರೆ. ಇವರು ರಚಿಸಿದ ‘ಏಕಾದಶಾನ’ ನಾಟಕವು ಜೀವನರಾಮ್ ಸುಳ್ಯ ನಿರ್ದೇಶನದಲ್ಲಿ ಎರಡು ಬಾರಿ ರಾಷ್ಟ್ರೀಯ ರಂಗ ಪ್ರಶಸ್ತಿ, ‘ಬರ್ಬರೀಕ’ ನಾಟಕಕ್ಕೆ, ಗದಗದ ಫ.ಶಿ.ಭಾಂಡಗೆ ಪ್ರಶಸ್ತಿ, ಧಾರವಾಡದ ದ.ರಾ.ಬೇಂದ್ರೆ ಪ್ರಶಸ್ತಿ, ‘ವೈದ್ಯೋ ನಾರಾಯಣೋ ಹರಿ’ ಈ ನಾಟಕಕ್ಕೆ ಉಡುಪಿಯ ರಂಗಭೂಮಿಯವರು ಆಯೋಜಿಸಿದ ರಾಷ್ಟ್ರೀಯ ಕನ್ನಡ ನಾಟಕ ರಚನಾ ಸ್ಪರ್ಧೆಯಲ್ಲಿ ಬಹುಮಾನ, ‘ಪೊಸ ಒಸರ್’ ತುಳು ಕವನ ಸಂಕಲನ, ೨೦೦೭ರ ತುಳು ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ, ‘ಬರ್ಬರೀಕ’ (ತುಳು ನಾಟಕ) ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ೨೦೧೬ ನೆ ಸಾಲಿನ ಪುಸ್ತಕ ಬಹುಮಾನ ಪಡೆದಿರುತ್ತದೆ. ಸುಮಾರು ಇಪ್ಪತ್ತಕ್ಕೂ ಹೆಚ್ಚು ತುಳು, ಕನ್ನಡ ಸಿನೆಮಾಗಳಿಗೆ ಹಾಡು, ಸಂಭಾಷಣೆ, ಚಿತ್ರಕತೆ ಬರೆದಿದ್ದಾರೆ. ಅದರಲ್ಲಿ ಕಾಂತಾರದ ವರಾಹರೂಪಂ ಹಾಡು ಸೇರಿದಂತೆ ಮೂರು ಹಾಡುಗಳು ಪ್ರಸಿದ್ಧಿಗೊಂಡಿವೆ.

  • Daddal Kaadina Mouna

    Author: Shashiraj Kavoor

    ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.

     

    Interested readers may write to us at mup@manipal.edu about purchasing the book.

    Also available on

     

    240.00