Dodda Samagara Nalmoga
₹350.00
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
| Author | |
|---|---|
| Format |
Related products
-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Colours of the Rainbow
₹450.00Author: Umesh Bhat
The author, through Colours of the Rainbow, tells us that everyone is destined for his/her own rainbow with a pot of gold at the other end if, one has a will, works hard on it, and with a little bit of luck. The book narrates the dream journey of a village boy.
Interested readers may write to us at mup@manipal.edu about purchasing the book.
-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Grama Sannidhya
ಗ್ರಾಮ ಸಾನ್ನಿಧ್ಯ₹300.00Author: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Tilo’s Troops- Handiwork of a Primatologist in Vietnam
₹680.00Author: Murali Pai
In 1993, Tilo Nadler, an ageing German welder turned air-conditioning engineer, photographer, filmmaker and self-made biologist arrived in Vietnam for training foresters in Cuc Phuong National Park to secure the Park from poachers, hunters and vandals. Within two months, he is tasked with the care of two confiscated sub adult male Delacour’s langurs, a rare, endemic and critically endangered primate species. This book narrates Tilo’s story to start-up a world class rehabilitation centre for endangered primates against all odds in Vietnam. This book celebrates two possibilities. First, endangered primates are given a new lease of life at Endangered Primates Rescue Centre (EPRC) after their rescue from sordid conditions and joined-up with other survivors in captivity before their final release into appropriate habitat to establish troops. Second, the raising of troops or foot soldiers groomed by Tilo in the art and science of primate rehabilitation. Tilo’s abiding passion is to make both his troops gain a foothold in Vietnam.
Interested readers may write to us at mup@manipal.edu about purchasing the book.
-
Lady Lokasundari Raman: Reflections of Her Early Life and Times
₹380.00Lady Lokasundari Raman was a charismatic person in her own right, as well as a devoted helpmate to her scientist-husband, Sir C V Raman. The book traces her early life in Madurai, Chennai and Calcutta, and we get a glimpse of the role of a young woman in the early decades of the twentieth century as she went forward bearing the many responsibilities of an extended family. This biography brings to light details of an unconventional wedding that had to be postponed due to societal pressures and an unconventional marriage between two great individuals.
Interested customers may write to us at mup@manipal.edu about purchasing the book.
Also available on


















