Dodda Samagara Nalmoga
₹350.00
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
| Format |
|---|
Related products
-
Madhavi Kathana Kavya
₹195.00Author: ONV Kurup, Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on

-
Life and Teachings of Shrimad Sudhindra Tirtha Swamiji
₹180.00Translator: Saratchandra Shenoi
Shrimad Sudhindra Tirtha Swamiji was the 20th Mathadhipati of Shree Kashi Math Samsthan and the beloved Dharma Guru of the Gowda Saraswat Brahmin community. The Shree Kashi Math Samsthan has a long and glorious history, with numerous branches and institutions across India.
This volume provides an overview of Swamiji’s life and teachings. It features a pen portrait of Swamiji, along with notes on select milestone events that marked his spiritual journey. Additional insights into related topics enrich the narrative, while a lyrical tribute adds a heartfelt dimension to the book.
At its core, the book presents a compilation of Swamiji’s teachings, drawn from his many discourses. These teachings are a source of spiritual knowledge and practical wisdom that offer timeless guidance and inspiration to readers.
Interested readers may write to us at mup@manipal.edu about purchasing the book.
Also available on

-
Bhashantara Jijnase, Pratyakshike
₹395.00Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on

-
Colours of the Rainbow
₹450.00Author: Umesh Bhat
The author, through Colours of the Rainbow, tells us that everyone is destined for his/her own rainbow with a pot of gold at the other end if, one has a will, works hard on it, and with a little bit of luck. The book narrates the dream journey of a village boy.
Interested readers may write to us at mup@manipal.edu about purchasing the book.
-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Tilo’s Troops- Handiwork of a Primatologist in Vietnam
₹680.00Author: Murali Pai
In 1993, Tilo Nadler, an ageing German welder turned air-conditioning engineer, photographer, filmmaker and self-made biologist arrived in Vietnam for training foresters in Cuc Phuong National Park to secure the Park from poachers, hunters and vandals. Within two months, he is tasked with the care of two confiscated sub adult male Delacour’s langurs, a rare, endemic and critically endangered primate species. This book narrates Tilo’s story to start-up a world class rehabilitation centre for endangered primates against all odds in Vietnam. This book celebrates two possibilities. First, endangered primates are given a new lease of life at Endangered Primates Rescue Centre (EPRC) after their rescue from sordid conditions and joined-up with other survivors in captivity before their final release into appropriate habitat to establish troops. Second, the raising of troops or foot soldiers groomed by Tilo in the art and science of primate rehabilitation. Tilo’s abiding passion is to make both his troops gain a foothold in Vietnam.
Interested readers may write to us at mup@manipal.edu about purchasing the book.
-
Vaidehi Dhvani
₹275.00Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on



















Be the first to review “Dodda Samagara Nalmoga”
You must be logged in to post a review.