Dodda Samagara Nalmoga
₹350.00
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
| Author | |
|---|---|
| Format |
Related products
-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Life and Teachings of Shrimad Sudhindra Tirtha Swamiji
₹180.00Translator: Saratchandra Shenoi
Shrimad Sudhindra Tirtha Swamiji was the 20th Mathadhipati of Shree Kashi Math Samsthan and the beloved Dharma Guru of the Gowda Saraswat Brahmin community. The Shree Kashi Math Samsthan has a long and glorious history, with numerous branches and institutions across India.
This volume provides an overview of Swamiji’s life and teachings. It features a pen portrait of Swamiji, along with notes on select milestone events that marked his spiritual journey. Additional insights into related topics enrich the narrative, while a lyrical tribute adds a heartfelt dimension to the book.
At its core, the book presents a compilation of Swamiji’s teachings, drawn from his many discourses. These teachings are a source of spiritual knowledge and practical wisdom that offer timeless guidance and inspiration to readers.
Interested readers may write to us at mup@manipal.edu about purchasing the book.
Also available on

-
Colours of the Rainbow
₹450.00Author: Umesh Bhat
The author, through Colours of the Rainbow, tells us that everyone is destined for his/her own rainbow with a pot of gold at the other end if, one has a will, works hard on it, and with a little bit of luck. The book narrates the dream journey of a village boy.
Interested readers may write to us at mup@manipal.edu about purchasing the book.
-
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Grama Sannidhya
ಗ್ರಾಮ ಸಾನ್ನಿಧ್ಯ₹300.00Author: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Mukha Mudre – Kyamaradalli Kannada Saahitigalu
₹690.00Author: A N Mukunda
ಪೋರ್ಟ್ರೇಟ್ ಅಂದರೆ ಕೇವಲ ಭಾವಚಿತ್ರವಲ್ಲ, ಅದೊಂದು ‘ವಿಶಿಷ್ಟ ಭಾವಚಿತ್ರ’ ಅಥವಾ ‘ವ್ಯಕ್ತಿತ್ವ ಚಿತ್ರ’ ಎನ್ನುವ ಮುಕುಂದರ ನಿಲುವು ಈ ಛಾಯಾಚಿತ್ರಗಳಲ್ಲಿ ಮೂರ್ತವಾಗಿ ವ್ಯಕ್ತವಾಗಿದೆ. ವ್ಯಕ್ತಿಯ ಮುಖವೇ ಅವನ ವ್ಯಕ್ತಿತ್ವದ ಸಮರ್ಪಕ ಅಭಿವ್ಯಕ್ತಿ ಎಂಬ ಪ್ರಬಲವಾದ ನಂಬಿಕೆ ಹಾಗೂ ವಿಶ್ವಾಸಗಳನ್ನು ಇಟ್ಟುಕೊಂಡಿರುವ ಮುಕುಂದರು ಅತ್ಯಂತ ಸಂಯಮದಿಂದ ಏಕಾಗ್ರತೆಯಿಂದ ಕಾದು ಸೆರೆಹಿಡಿದ ‘ಮಾಂತ್ರಿಕ ಕ್ಷಣ’ಗಳಿಂದಾಗಿ ಈ ಎಲ್ಲ ಭಾವಚಿತ್ರಗಳಿಗೆ ಏಕಕಾಲಕ್ಕೆ ಅಧಿಕೃತತೆ ಮತ್ತು ಆಪ್ತತೆ ಲಭ್ಯವಾಗಿವೆ. ಇಂತಹ ‘ಫೋಟೋ ಪುಸ್ತಕ’ವೊಂದು ಕನ್ನಡದಲ್ಲಿ ಪ್ರಕಟವಾಗುತ್ತಿರುವುದು ಇದೇ ಮೊದಲು.
Interested readers may write to us at mup@manipal.edu about purchasing the book.

















