Dodda Samagara Nalmoga
₹350.00
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
| Format |
|---|
Related products
-
Tilo’s Troops- Handiwork of a Primatologist in Vietnam
₹680.00Author: Murali Pai
In 1993, Tilo Nadler, an ageing German welder turned air-conditioning engineer, photographer, filmmaker and self-made biologist arrived in Vietnam for training foresters in Cuc Phuong National Park to secure the Park from poachers, hunters and vandals. Within two months, he is tasked with the care of two confiscated sub adult male Delacour’s langurs, a rare, endemic and critically endangered primate species. This book narrates Tilo’s story to start-up a world class rehabilitation centre for endangered primates against all odds in Vietnam. This book celebrates two possibilities. First, endangered primates are given a new lease of life at Endangered Primates Rescue Centre (EPRC) after their rescue from sordid conditions and joined-up with other survivors in captivity before their final release into appropriate habitat to establish troops. Second, the raising of troops or foot soldiers groomed by Tilo in the art and science of primate rehabilitation. Tilo’s abiding passion is to make both his troops gain a foothold in Vietnam.
Interested readers may write to us at mup@manipal.edu about purchasing the book.
-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Colours of the Rainbow
₹450.00Author: Umesh Bhat
The author, through Colours of the Rainbow, tells us that everyone is destined for his/her own rainbow with a pot of gold at the other end if, one has a will, works hard on it, and with a little bit of luck. The book narrates the dream journey of a village boy.
Interested readers may write to us at mup@manipal.edu about purchasing the book.
-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Vaidehi Dhvani
₹275.00Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on

-
Geoffrey Bawa – A Conscious Perception
₹650.00This book is all about giving the readers a peek view into the life of Geoffrey Bawa; Sri Lanka’s most famous architect… a book that reveals an insight into his work through his most famous projects accompanied by beautiful hand drawn illustrations. Alluring and simply authentic, these self-narrative illustrations are a result of a personal experience. This book will give readers an understanding of how successfully Geoffrey Bawa had inculcated spaces, vistas and landscape with that of the built environment bringing about a touch of Modern Tropism and fusing it together with the rich culture and traditions of Sri Lanka.
Interested readers may write to us at mup@manipal.edu about purchasing the book.
-
Autobiography of a Surgeon
₹300.00Author: C Ramakrishna Ballal
This is an interesting and a vivid account of life by an accomplished surgeon with his first-hand knowledge of medicine and the rich experience gathered over the years. The narrative is almost like a self-portrait by an artist. Author’s exceptional journey from a young lad in an agrarian family to a celebrated doctor-teacher, not only documents his personal life but that of medical and surgical history of about five decades in this region.
Interested readers may write to us at mup@manipal.edu about purchasing the book.
-
Life and Teachings of Shrimad Sudhindra Tirtha Swamiji
₹180.00Translator: Saratchandra Shenoi
Shrimad Sudhindra Tirtha Swamiji was the 20th Mathadhipati of Shree Kashi Math Samsthan and the beloved Dharma Guru of the Gowda Saraswat Brahmin community. The Shree Kashi Math Samsthan has a long and glorious history, with numerous branches and institutions across India.
This volume provides an overview of Swamiji’s life and teachings. It features a pen portrait of Swamiji, along with notes on select milestone events that marked his spiritual journey. Additional insights into related topics enrich the narrative, while a lyrical tribute adds a heartfelt dimension to the book.
At its core, the book presents a compilation of Swamiji’s teachings, drawn from his many discourses. These teachings are a source of spiritual knowledge and practical wisdom that offer timeless guidance and inspiration to readers.
Interested readers may write to us at mup@manipal.edu about purchasing the book.
Also available on



















Be the first to review “Dodda Samagara Nalmoga”
You must be logged in to post a review.