Let Polly Thrive: May anyone shout as they please
₹200.00
Author: Kotiganahalli Ramaiah, Translator: Anusha Ravi Sood
Who are you?
Let Polly Thrive: May Anyone Shout as They Please poses this very question. Can a piece of laminated paper define your identity, or should society’s rules dictate who you are? Why can’t a man dream of food, or a buffalo fall in love with a girl? A quirky yet hard-hitting play, it holds up a mirror to you and me, forcing us to take a long, honest look at ourselves. Perhaps the answer lies within this unusual love triangle between a man, a woman, and a buffalo—or maybe it flickers under the lantern that lights up a Dalit woman’s home. Could it be hidden within the farce of communism among the privileged castes, which reeks of casteism?
Well, if you can figure out this riddle, let me in on it too.
Interested readers may write to us at mup@manipal.edu about purchasing the book.
Categories: | Indian Literature in Translation, Kannada |
---|
Author | |
---|---|
Format |
Related products
-
Sangeetashastragranthachandrike Volume-2
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
-
Gombi Maduvi
Author: Revati Nadgir
ಉತ್ತರ ಕರ್ನಾಟಕದ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಈ ಕೃತಿಯಲ್ಲಿ ಬಡ, ಮುಗ್ಧ ಹುಡುಗಿಯೊಬ್ಬಳ ಕನಸುಗಳು, ಮಾನವೀಯತೆಯನ್ನು ಮೆರೆಯುವ ಹಲವು ಪಾತ್ರಗಳ ನಡುವೆ ವಿಧಿಯ ಕೈವಾಡದಿಂದ ಚದುರಿ ಹೋಗುವ, ಅಂತಃಕರಣವನ್ನು ಕಲಕುವ ಚಿತ್ರಣವಿದೆ. ಸ್ಥಳೀಯ ನಂಬಿಕೆ-ಆಚರಣೆ, ಆಶೋತ್ತರಗಳನ್ನು ದಟ್ಟವಾಗಿ ಹೆಣೆದುಕೊಳ್ಳುತ್ತ ಒಂದು ಪುಟ್ಟ ವಿಶ್ವವನ್ನೇ ಈ ನಾಟಕ ಸೃಷ್ಟಿಸುತ್ತದೆ. ರೇವತಿ ನಾಡಗೀರ ಅವರ ಚೊಚ್ಚಲ ಕೃತಿಯಾದ ಇದರಲ್ಲಿ, ಅವರ ಸಹೃದಯತೆ, ಉತ್ತರ ಕರ್ನಾಟಕದ ಸಂಸ್ಕೃತಿಯ ಅನುಭವ ಎದ್ದು ಕಾಣುತ್ತದೆ.
Interested customers may write to us at mup@manipal.edu about purchasing the book.
Also available on
-
Kannadadalli Patthyaparishkarana- Ondu Kaipidi
Author: N T Bhat
ಸ್ವಾನುಭವವಷ್ಟನ್ನೇ ಬಂಡವಾಳವಾಗಿರಿಸಿಕೊಂಡು ತೊಡಗಿದ ಉದ್ಯಮ ಈ ಹೊತ್ತಗೆಯ ರಚನೆ. ಕನ್ನಡದಲ್ಲಿ ಕರಡಚ್ಚು ಪ್ರತಿಗಳನ್ನು ತಿದ್ದಿಕೊಟ್ಟ ಅನುಭವಗಳನ್ನು ತುಸು ವಿಸ್ತರಿಸಿ ಸಣ್ಣ ಕೈಪಿಡಿಯ ರೂಪದಲ್ಲಿ ತಂದರೆ ಒಳ್ಳೆಯದಲ್ಲವೇ ಎಂಬ ಆಲೋಚನೆ ಈ ಕಿರುಹೊತ್ತಗೆಯ ರಚನೆಯ ಮೂಲ. -ಎನ್. – ತಿರುಮಲೇಶ್ವರ ಭಟ್ಟ ಡಾ. ತಿರುಮಲೇಶ್ವರ ಭಟ್ಟರು ದೀರ್ಘಕಾಲ ಅನುವಾದಕ್ಷೇತ್ರದಲ್ಲಿ (ಇಂಗ್ಲಿಷ್ನಿಂದ ಕನ್ನಡಕ್ಕೆ, ಕನ್ನಡದಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಕನ್ನಡಕ್ಕೆ) ದುಡಿದವರು ಮತ್ತು ವಿವಿಧ ರೀತಿಯ ಪುಸ್ತಕಗಳ ಯೋಜನೆ, ಸಂಯೋಜನೆ, ಪುನರ್ನಿರೂಪಣೆ, ಸಂಪಾದನೆ ಮೊದಲಾದ ಕೆಲಸಗಳನ್ನು ಮಾಡಿದವರು. ಈಯೆಲ್ಲ ಕೆಲಸಗಳಲ್ಲಿ ಸತತವಾಗಿ ಒಳಗೊಂಡಿರುವುದು ಕರಡಚ್ಚು ತಿದ್ದುವ ಕೆಲಸ. ಯಾವುದೇ ಕಾರ್ಯಕ್ರಮದಲ್ಲಿದ್ದರೂ ಅದರ ಎಡೆಯೆಡೆಯ ಬಿಡುವಿನಲ್ಲಿ ಒಂದಿಷ್ಟು ಕರಡಚ್ಚು ತಿದ್ದುವ ಕೆಲಸವನ್ನು ಸತತವಾಗಿ ಮಾಡುತ್ತಲೇ ಬಂದವರು. ಪಠ್ಯಪರಿಷ್ಕರಣದ ಹಲವು ಹಂತಗಳನ್ನು ಚೆನ್ನಾಗಿ ಬಲ್ಲ ಅವರು ತಮ್ಮಲ್ಲಿರುವ ಮಾಹಿತಿಯನ್ನೂ ಅನುಭವವನ್ನೂ ಕ್ರೋಡೀಕರಿಸಿ ಕನ್ನಡದಲ್ಲಿ ಪಠ್ಯಪರಿಷ್ಕರಣದ ಆವಶ್ಯಕತೆಯೇನೆಂಬುದು ಸರಳವಾಗಿ ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ. ಅವರಿಂದ ಭಾಷಾಕ್ಷೇತ್ರಕ್ಕೆ ಇನ್ನಷ್ಟು ಸೇವೆ ಸಲ್ಲಲಿ ಎಂಬುದು ಮನದಾಳದ ಆಶಯ. – ಪಾದೇಕಲ್ಲು ವಿಷ್ಣು ಭಟ್ಟ.
Interested readers may write to us at mup@manipal.edu about purchasing the book.
Also available on
-
Grama Sannidhya
ಗ್ರಾಮ ಸಾನ್ನಿಧ್ಯAuthor: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Dodda Samagara Nalmoga
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
-
The Prince
Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on
-
Puttakkana Highway
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
-
Mahila Mahabharatha
Author: K Madhavan Translator: Abhilasha H
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on