Let Polly Thrive: May anyone shout as they please
₹200.00
Author: Kotiganahalli Ramaiah, Translator: Anusha Ravi Sood
Who are you?
Let Polly Thrive: May anyone shout as they please poses this very question. Can a piece of laminated paper define your identity, or should society’s rules dictate who you are? Why can’t a man dream of food, or a buffalo fall in love with a girl? A quirky yet hard-hitting play, it holds up a mirror to you and me, forcing us to take a long, honest look at ourselves. Perhaps the answer lies within this unusual love triangle between a man, a woman, and a buffalo—or maybe it flickers under the lantern that lights up a Dalit woman’s home. Could it be hidden within the farce of communism among the privileged castes, which reeks of casteism?
Well, if you can figure out this riddle, let me in on it too.
Interested readers may write to us at mup@manipal.edu about purchasing the book.
Categories: | Indian Literature in Translation, Kannada |
---|
Author | |
---|---|
Format |
Related products
-
Madhavi Kathana Kavya
Author: ONV Kurup Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on
-
Sangeetashastragranthachandrike Volume-2
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
-
The Prince
Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on
-
Vaidehi Dhvani
Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on
-
Chandrayana
Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Nanna Parni Shaale
Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on
eBook available on
-
Bhagavantana Kandammagalu
Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on
-
Daddal Kaadina Mouna
Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.