Phedra
₹180.00
Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
| Categories: | Kannada, Plays and Theatre, Texts in Translation |
|---|
| Format |
|---|
Related products
-
The Path of Proofs – Pramanapaddhati of Sri Jayatirtha
₹250.00Author: Shrinivasa Varakhedi
Epistemology of the Dvaita school of thought is presented in this short monograph Pramāṇapaddhati – the Path of Proofs, authored by Śrī Jayatīrtha. Epistemology is the science of knowledge that deals with the origin and nature of cognitive events and their means.
Ācārya Madhva, the proponent of the Dvaita school, has explained about the epistemology of this new school in his works. Since Madhva’s language is profound and the elucidations are scattered over his several works, it is difficult to comprehend for a novice. Hence, Pramāṇapaddhati was composed by his successor of third generation Śrī Jayatīrtha. The simple and captivating
style of this work is sure to ignite the interest in the readers to conduct further study in detail. This work is not only regarded as a standard textbook of Dvaita studies, but also considered as a basic authentic work in the Dvaita dialectic literature.This work is rendered into English by Prof Shrinivasa Varakhedi adopting the mirror-translation method.
Interested readers may write to us at mup@manipal.edu about purchasing the book.Also available on

-
Christa Shaka 1800 Ra Modalina Mysooru ithihaasa
₹295.00Author: D S Achuta Rao Translator: S Narendra Prasad
೧೮೦೦ ಕ್ರಿ. ಶ. ದ ಹಿಂದಿನ ಮೈಸೂರು ಇತಿಹಾಸವು ಪ್ರೊ. ಡಿ ಎಸ್ ಅಚ್ಯುತ ರಾವ್ ಅವರ ಜೀವನ ಮತ್ತು ಕೆಲಸದ ಬಗ್ಗೆ. ಮೈಸೂರು ಇತಿಹಾಸದ ಕುರಿತಾದ ಅವರ ಸಂಶೋಧನೆಯು 1940-65ರ ಅವಧಿಯಲ್ಲಿ ಅವರು ಪ್ರಕಟಿಸಿದ ಹತ್ತು ಸೂಚ್ಯಂಕ ಲೇಖನಗಳಿಂದ ಪ್ರತಿನಿಧಿಸುತ್ತದೆ. ಅವರು ಭಾರತದ ಇತಿಹಾಸ ಮತ್ತು ಅದರ ಅದ್ಭುತ ಭೂತಕಾಲವನ್ನು ಸಕ್ರಿಯವಾಗಿ ಜನಪ್ರಿಯಗೊಳಿಸಿದರು. ಮಹಾರಾಜಾಸ್ ಕಾಲೇಜ್ ಹಿಸ್ಟರಿ ಸೊಸೈಟಿ, ಭಾರತದ ವಸಾಹತು ಸಂಶೋಧಕರು ಮತ್ತು ಕನ್ನಡ ವಿಶ್ವಕೋಶದಲ್ಲಿ ಮೈಸೂರು ಸರ್ಕಾರದ ಉಪಕ್ರಮದಿಂದ ಭಾರತೀಯ ಇತಿಹಾಸದಲ್ಲಿ ಉಪಕ್ರಮಗಳನ್ನು ಪ್ರಸ್ತುತಪಡಿಸುವುದರಿಂದ ಅಂತಹ ಮೂರು ಲೇಖನಗಳನ್ನು ಸೇರಿಸಲಾಗಿದೆ. ಎರಡನೇ ಭಾಗದಲ್ಲಿ ಅವರ ಜೀವನಚರಿತ್ರೆಯಲ್ಲಿ, ಅವರ ವಿದ್ಯಾರ್ಥಿಗಳು ಮತ್ತು ಮಕ್ಕಳು ಶಿಕ್ಷಕ ಮತ್ತು ತಂದೆಯಾಗಿ ಅವರ ಜೀವನದ ಬಗ್ಗೆ ಬರೆದಿದ್ದಾರೆ, ಅವರ ಅವಧಿಯ ಸಂದರ್ಭವನ್ನು ಒದಗಿಸಿದ್ದಾರೆ. ಪುಸ್ತಕವು ಕಳೆದ ಶತಮಾನದ ಮಧ್ಯದಲ್ಲಿ ಇತಿಹಾಸ ಸಂಶೋಧನೆಗೆ ಆಸಕ್ತಿದಾಯಕ ವಿಂಡೋವನ್ನು ಪ್ರಸ್ತುತಪಡಿಸುತ್ತದೆ.
Interested readers may write to us at mup@manipal.edu about purchasing the book.
-
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on

-
U-Turn
₹180.00Author: Anand Mhasvekar, Translator: Neeta Inamdar
ಮರಾಠಿ ನಾಟಕ. ಯು-ಟರ್ನ್ ಮಹಾರಾಷ್ಟ್ರ ಮತ್ತು ಅದರಾಚೆಗೆ 585 ಕ್ಕೂ ಹೆಚ್ಚು ಪ್ರದರ್ಶನಗಳೊಂದಿಗೆ ಲಕ್ಷಾಂತರ ಹೃದಯಗಳನ್ನು ಗೆದ್ದಿದೆ. ಗುಜರಾತಿಯಲ್ಲಿ ಇದರ ಅನುವಾದವು 115 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ ಮತ್ತು ಹಿಂದಿಯಲ್ಲಿ 50 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಈ ಯಶಸ್ಸು ಶ್ರೀಮತಿ ಸವಿತಾ ಶಾಸ್ತ್ರಿಯವರ ಬೆಂಬಲದೊಂದಿಗೆ ಕನ್ನಡದಲ್ಲಿ ಈ ಕೃತಿಯನ್ನು ಅನುವಾದಿಸಲು ಪ್ರೊ.ನೀತಾ ಇನಾಮದಾರ್ ಅವರನ್ನು ಪ್ರೋತ್ಸಾಹಿಸಿತು. ನಾಟಕವು ಉದ್ದಕ್ಕೂ ಕೇವಲ ಎರಡು ಪಾತ್ರಗಳನ್ನು ಹೊಂದಿದೆ ಮತ್ತು ಇಡೀ ಅವಧಿಗೆ ವೇದಿಕೆಯ ಮೇಲಿರುವ ಇಬ್ಬರನ್ನು ಹೊರತುಪಡಿಸಿ ಒಂದೆರಡು ಧ್ವನಿಗಳನ್ನು ಹೊಂದಿದೆ. ನಾಟಕದ ಕೇಂದ್ರ ಕಲ್ಪನೆಯು ಆಧುನಿಕತೆಯನ್ನು ಒಪ್ಪಿಕೊಳ್ಳುವಲ್ಲಿನ ವ್ಯತ್ಯಾಸಗಳು ಮತ್ತು ಎರಡು ವಿಭಿನ್ನ ತಲೆಮಾರುಗಳಲ್ಲಿ ಇದಕ್ಕೆ ಸಂಬಂಧಿಸಿದ ಸಂಘರ್ಷಗಳು. ವಿಚ್ಛೇದಿತ ಸೇನೆಯ ಮೇಜರ್ ಮತ್ತು 50 ರ ದಶಕದ ಅಂತ್ಯದಲ್ಲಿರುವ ವಿಧವೆಯ ನಡುವಿನ ಒಡನಾಟವನ್ನು ಅವರ ಮಕ್ಕಳು ವಿರೋಧಿಸುತ್ತಾರೆ ಮತ್ತು ಅವರು ತಮ್ಮನ್ನು ತಾವು ಆಧುನಿಕತೆಯನ್ನು ಅಳವಡಿಸಿಕೊಂಡರೂ ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ನೀತಾ ಇನಾಮದಾರ್ ಅವರು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ (MU) ಯುರೋಪಿಯನ್ ಅಧ್ಯಯನ ವಿಭಾಗದ (DES) ಮುಖ್ಯಸ್ಥರಾಗಿದ್ದಾರೆ ಮತ್ತು ಮಣಿಪಾಲ್ ಯೂನಿವರ್ಸಲ್ ಪ್ರೆಸ್ ನ (MUP) ಮುಖ್ಯ ಸಂಪಾದಕರಾಗಿದ್ದಾರೆ. ಸಂಗೀತ ಮತ್ತು ರಂಗಭೂಮಿ ಅವರ ಆಸಕ್ತಿಗಳಾಗಿದ್ದು, ಶ್ರೀಮತಿ ಸವಿತಾ ಶಾಸ್ತ್ರಿ ಅವರ ನೆರವಿನೊಂದಿಗೆ ಈ ಕೆಲಸವನ್ನು ಕೈಗೊಳ್ಳುವಂತೆ ಮಾಡಿತು. ಸವಿತಾ ಶಾಸ್ತ್ರಿ ಅವರು ಮಣಿಪಾಲದ ಮಹಿಳಾ ಉದ್ಯಮಿಯಾಗಿದ್ದು, ಅವರು ಬಾಬಾ ಆಮ್ಟೆ ಅವರ ಆನಂದವನಕ್ಕೆ ಧನಸಹಾಯವನ್ನೂ ಮಾಡುತ್ತಾರೆ. ಅವರು ಮರಾಠಿ, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪುಸ್ತಕಗಳು ಮತ್ತು ನಾಟಕಗಳ ಓದುಗರಾಗಿದ್ದಾರೆ, ಅವರು ಈ ಅನುವಾದ ಯೋಜನೆಗೆ ತಮ್ಮ ಬೆಂಬಲವನ್ನು ನೀಡಿದರು.
Interested readers may write to us at mup@manipal.edu about purchasing the book.
-
Humanitarianism and Democracy (Maanava Dharmah – Prajaaprabhutvam Cheti Shatakadvayam)
₹240.00Author: M V Nadkarni
These Satkarnas are Prof Nadkarni’s passionate plea for an authentic democratic order which guarantees the rights of every citizen while each citizen participates in it being fully aware of his / her duties. The complementarity of rights and duties is shown to be the essence of genuine democracy.
Interested customers may write to us at mup@manipal.edu about purchasing the book.
Also available on

-
Karakarthaprabodhini
₹345.00Author: Shivani V
Kaumudī (water lily) is the primer to study Sanskrit grammar, yet an ardent reader might find it a maze to untangle from its complexities. There is a need of Kaumudī (moonlight) to blossom it and show the light to reach its core. Kārakārthaprabodhinī is such an attempt. Kāraka, a factor that determines the relation between verb and the constituent words of a sentence, enables the reader to understand the intent of the sentence and thus critical discourses too. The Sanskrit grammatical texts and discourses have elaborated on the subtleties of Kāraka. Due to its profundity, there was a need for a lucid writing for the scholars and students for easy comprehension, which can be a reference book. Dr Potti made this possible for the Malayalam readers. Dr Shivani presents it for the Sanskrit fraternity too, with an introduction by Dr Varakhedi.
Interested customers may write to us at mup@manipal.edu about purchasing the book.
Also available on

-
BAKA – Collection of Two Plays
₹340.00Author: M S Keshava Prabhu, Translator: L V Shantakumari
Baka dramatizes the episode of Bakasura, from the Indian epic, Mahabharata. Baka is a cannibal demon that terrorizes a village with its horrifying attacks. The king of the village strikes an agreement with the demon, putting its people in peril. They live in constant fear for years until the sudden arrival of a hero changes everything.
A theatrical and evocative narration, this play satirically mirrors society’s greed and irresponsibility. It depicts power struggles through the conflict that arises between Baka the demon, the cowardly king, and the oppressed people.Interested customers may write to us at mup@manipal.edu about purchasing the book. -
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on










