Phedra
₹180.00
Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
| Categories: | Kannada, Plays and Theatre, Texts in Translation |
|---|
| Format |
|---|
Related products
-
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on

-
Christa Shaka 1800 Ra Modalina Mysooru ithihaasa
₹295.00Author: D S Achuta Rao Translator: S Narendra Prasad
೧೮೦೦ ಕ್ರಿ. ಶ. ದ ಹಿಂದಿನ ಮೈಸೂರು ಇತಿಹಾಸವು ಪ್ರೊ. ಡಿ ಎಸ್ ಅಚ್ಯುತ ರಾವ್ ಅವರ ಜೀವನ ಮತ್ತು ಕೆಲಸದ ಬಗ್ಗೆ. ಮೈಸೂರು ಇತಿಹಾಸದ ಕುರಿತಾದ ಅವರ ಸಂಶೋಧನೆಯು 1940-65ರ ಅವಧಿಯಲ್ಲಿ ಅವರು ಪ್ರಕಟಿಸಿದ ಹತ್ತು ಸೂಚ್ಯಂಕ ಲೇಖನಗಳಿಂದ ಪ್ರತಿನಿಧಿಸುತ್ತದೆ. ಅವರು ಭಾರತದ ಇತಿಹಾಸ ಮತ್ತು ಅದರ ಅದ್ಭುತ ಭೂತಕಾಲವನ್ನು ಸಕ್ರಿಯವಾಗಿ ಜನಪ್ರಿಯಗೊಳಿಸಿದರು. ಮಹಾರಾಜಾಸ್ ಕಾಲೇಜ್ ಹಿಸ್ಟರಿ ಸೊಸೈಟಿ, ಭಾರತದ ವಸಾಹತು ಸಂಶೋಧಕರು ಮತ್ತು ಕನ್ನಡ ವಿಶ್ವಕೋಶದಲ್ಲಿ ಮೈಸೂರು ಸರ್ಕಾರದ ಉಪಕ್ರಮದಿಂದ ಭಾರತೀಯ ಇತಿಹಾಸದಲ್ಲಿ ಉಪಕ್ರಮಗಳನ್ನು ಪ್ರಸ್ತುತಪಡಿಸುವುದರಿಂದ ಅಂತಹ ಮೂರು ಲೇಖನಗಳನ್ನು ಸೇರಿಸಲಾಗಿದೆ. ಎರಡನೇ ಭಾಗದಲ್ಲಿ ಅವರ ಜೀವನಚರಿತ್ರೆಯಲ್ಲಿ, ಅವರ ವಿದ್ಯಾರ್ಥಿಗಳು ಮತ್ತು ಮಕ್ಕಳು ಶಿಕ್ಷಕ ಮತ್ತು ತಂದೆಯಾಗಿ ಅವರ ಜೀವನದ ಬಗ್ಗೆ ಬರೆದಿದ್ದಾರೆ, ಅವರ ಅವಧಿಯ ಸಂದರ್ಭವನ್ನು ಒದಗಿಸಿದ್ದಾರೆ. ಪುಸ್ತಕವು ಕಳೆದ ಶತಮಾನದ ಮಧ್ಯದಲ್ಲಿ ಇತಿಹಾಸ ಸಂಶೋಧನೆಗೆ ಆಸಕ್ತಿದಾಯಕ ವಿಂಡೋವನ್ನು ಪ್ರಸ್ತುತಪಡಿಸುತ್ತದೆ.
Interested readers may write to us at mup@manipal.edu about purchasing the book.
-
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
A Valiant Journey Through the Silk Route
₹575.00Author: Paravastu Lokeshwar, Translator: Shobha Dulluri
A Valiant Journey through the Silk Route is a travelogue that covers the incredible travel across the ancient Silk Route with the most alluring halts in Uzbekistan, Kyrgyzstan, and China to achieve a lifetime dream of a vagabond. The journey that starts in New Delhi and ends in Beijing opens up new vistas that are fascinating. The route covers historical monuments, museums, ancient oases, cemeteries, rural settings, public marketplaces, and several other landmarks and attractions. The travel continues through the deserts, passes by the rivers, treks up on the mountainous terrains – the path through which the great ancient travellers trudged.
Interested customers may write to us at mup@manipal.edu about purchasing the book.
Also available on

-
BAKA – Collection of Two Plays
₹340.00Author: M S Keshava Prabhu, Translator: L V Shantakumari
Baka dramatizes the episode of Bakasura, from the Indian epic, Mahabharata. Baka is a cannibal demon that terrorizes a village with its horrifying attacks. The king of the village strikes an agreement with the demon, putting its people in peril. They live in constant fear for years until the sudden arrival of a hero changes everything.
A theatrical and evocative narration, this play satirically mirrors society’s greed and irresponsibility. It depicts power struggles through the conflict that arises between Baka the demon, the cowardly king, and the oppressed people.Interested customers may write to us at mup@manipal.edu about purchasing the book. -
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
U-Turn
₹180.00Author: Anand Mhasvekar, Translator: Neeta Inamdar
ಮರಾಠಿ ನಾಟಕ. ಯು-ಟರ್ನ್ ಮಹಾರಾಷ್ಟ್ರ ಮತ್ತು ಅದರಾಚೆಗೆ 585 ಕ್ಕೂ ಹೆಚ್ಚು ಪ್ರದರ್ಶನಗಳೊಂದಿಗೆ ಲಕ್ಷಾಂತರ ಹೃದಯಗಳನ್ನು ಗೆದ್ದಿದೆ. ಗುಜರಾತಿಯಲ್ಲಿ ಇದರ ಅನುವಾದವು 115 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ ಮತ್ತು ಹಿಂದಿಯಲ್ಲಿ 50 ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡಿದೆ. ಈ ಯಶಸ್ಸು ಶ್ರೀಮತಿ ಸವಿತಾ ಶಾಸ್ತ್ರಿಯವರ ಬೆಂಬಲದೊಂದಿಗೆ ಕನ್ನಡದಲ್ಲಿ ಈ ಕೃತಿಯನ್ನು ಅನುವಾದಿಸಲು ಪ್ರೊ.ನೀತಾ ಇನಾಮದಾರ್ ಅವರನ್ನು ಪ್ರೋತ್ಸಾಹಿಸಿತು. ನಾಟಕವು ಉದ್ದಕ್ಕೂ ಕೇವಲ ಎರಡು ಪಾತ್ರಗಳನ್ನು ಹೊಂದಿದೆ ಮತ್ತು ಇಡೀ ಅವಧಿಗೆ ವೇದಿಕೆಯ ಮೇಲಿರುವ ಇಬ್ಬರನ್ನು ಹೊರತುಪಡಿಸಿ ಒಂದೆರಡು ಧ್ವನಿಗಳನ್ನು ಹೊಂದಿದೆ. ನಾಟಕದ ಕೇಂದ್ರ ಕಲ್ಪನೆಯು ಆಧುನಿಕತೆಯನ್ನು ಒಪ್ಪಿಕೊಳ್ಳುವಲ್ಲಿನ ವ್ಯತ್ಯಾಸಗಳು ಮತ್ತು ಎರಡು ವಿಭಿನ್ನ ತಲೆಮಾರುಗಳಲ್ಲಿ ಇದಕ್ಕೆ ಸಂಬಂಧಿಸಿದ ಸಂಘರ್ಷಗಳು. ವಿಚ್ಛೇದಿತ ಸೇನೆಯ ಮೇಜರ್ ಮತ್ತು 50 ರ ದಶಕದ ಅಂತ್ಯದಲ್ಲಿರುವ ವಿಧವೆಯ ನಡುವಿನ ಒಡನಾಟವನ್ನು ಅವರ ಮಕ್ಕಳು ವಿರೋಧಿಸುತ್ತಾರೆ ಮತ್ತು ಅವರು ತಮ್ಮನ್ನು ತಾವು ಆಧುನಿಕತೆಯನ್ನು ಅಳವಡಿಸಿಕೊಂಡರೂ ವಿಭಿನ್ನ ರೀತಿಯಲ್ಲಿ ವ್ಯಕ್ತಪಡಿಸುತ್ತಾರೆ. ನೀತಾ ಇನಾಮದಾರ್ ಅವರು ಮಣಿಪಾಲ್ ವಿಶ್ವವಿದ್ಯಾನಿಲಯದಲ್ಲಿ (MU) ಯುರೋಪಿಯನ್ ಅಧ್ಯಯನ ವಿಭಾಗದ (DES) ಮುಖ್ಯಸ್ಥರಾಗಿದ್ದಾರೆ ಮತ್ತು ಮಣಿಪಾಲ್ ಯೂನಿವರ್ಸಲ್ ಪ್ರೆಸ್ ನ (MUP) ಮುಖ್ಯ ಸಂಪಾದಕರಾಗಿದ್ದಾರೆ. ಸಂಗೀತ ಮತ್ತು ರಂಗಭೂಮಿ ಅವರ ಆಸಕ್ತಿಗಳಾಗಿದ್ದು, ಶ್ರೀಮತಿ ಸವಿತಾ ಶಾಸ್ತ್ರಿ ಅವರ ನೆರವಿನೊಂದಿಗೆ ಈ ಕೆಲಸವನ್ನು ಕೈಗೊಳ್ಳುವಂತೆ ಮಾಡಿತು. ಸವಿತಾ ಶಾಸ್ತ್ರಿ ಅವರು ಮಣಿಪಾಲದ ಮಹಿಳಾ ಉದ್ಯಮಿಯಾಗಿದ್ದು, ಅವರು ಬಾಬಾ ಆಮ್ಟೆ ಅವರ ಆನಂದವನಕ್ಕೆ ಧನಸಹಾಯವನ್ನೂ ಮಾಡುತ್ತಾರೆ. ಅವರು ಮರಾಠಿ, ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪುಸ್ತಕಗಳು ಮತ್ತು ನಾಟಕಗಳ ಓದುಗರಾಗಿದ್ದಾರೆ, ಅವರು ಈ ಅನುವಾದ ಯೋಜನೆಗೆ ತಮ್ಮ ಬೆಂಬಲವನ್ನು ನೀಡಿದರು.
Interested readers may write to us at mup@manipal.edu about purchasing the book.










Be the first to review “Phedra”
You must be logged in to post a review.