Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Grama Sannidhya
ಗ್ರಾಮ ಸಾನ್ನಿಧ್ಯ₹300.00Author: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Sangeetashastragranthachandrike Volume-2
₹650.00Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
-
Ati Sannakathe: Swarupa, Siddhi Mattu Sadhyate
₹160.00Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.
Also available on

eBook available on

-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on

-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.









