Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on

-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
Vaidehi Dhvani
₹275.00Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on

-
Aparichita
₹170.00Translator: Prakash Nayakತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on

-
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.









