Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Gombi Maduvi
₹130.00Author: Revati Nadgir
ಉತ್ತರ ಕರ್ನಾಟಕದ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಈ ಕೃತಿಯಲ್ಲಿ ಬಡ, ಮುಗ್ಧ ಹುಡುಗಿಯೊಬ್ಬಳ ಕನಸುಗಳು, ಮಾನವೀಯತೆಯನ್ನು ಮೆರೆಯುವ ಹಲವು ಪಾತ್ರಗಳ ನಡುವೆ ವಿಧಿಯ ಕೈವಾಡದಿಂದ ಚದುರಿ ಹೋಗುವ, ಅಂತಃಕರಣವನ್ನು ಕಲಕುವ ಚಿತ್ರಣವಿದೆ. ಸ್ಥಳೀಯ ನಂಬಿಕೆ-ಆಚರಣೆ, ಆಶೋತ್ತರಗಳನ್ನು ದಟ್ಟವಾಗಿ ಹೆಣೆದುಕೊಳ್ಳುತ್ತ ಒಂದು ಪುಟ್ಟ ವಿಶ್ವವನ್ನೇ ಈ ನಾಟಕ ಸೃಷ್ಟಿಸುತ್ತದೆ. ರೇವತಿ ನಾಡಗೀರ ಅವರ ಚೊಚ್ಚಲ ಕೃತಿಯಾದ ಇದರಲ್ಲಿ, ಅವರ ಸಹೃದಯತೆ, ಉತ್ತರ ಕರ್ನಾಟಕದ ಸಂಸ್ಕೃತಿಯ ಅನುಭವ ಎದ್ದು ಕಾಣುತ್ತದೆ.
Interested customers may write to us at mup@manipal.edu about purchasing the book.
Also available on

-
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
Phedra
₹180.00Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Daddal Kaadina Mouna
₹240.00Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Tapaalu Mani
₹140.00Author: Rabhindranath Tagore, Translator: Mounesh Badiger
ರಾಷ್ಟ್ರಕವಿ ರವೀಂದ್ರನಾಥ ಠಾಕೂರರ ‘ಡಾಕ್ ಘರ್’ ಬಹಳ ಪ್ರಸಿದ್ಧ ನಾಟಕ. ಮಗುವಿನ ಮನೋದೈಹಿಕ ಸಾಧ್ಯತೆಗಳನ್ನು ಕಲೆಯ ಸೂಕ್ಷ್ಮಕಣ್ಣಿನಿಂದ ನೋಡುವ ಎರಡಂಕದ ಪುಟ್ಟ ನಾಟಕವಿದು. ಇದು ಸೃಷ್ಟಿಸುವ ಮಾಯಾವಾಸ್ತವ ಬಹಳ ಅಪರೂಪವಾದದ್ದು. ಇದರ ಮುಖ್ಯ ಪಾತ್ರ ಮಗುವೇ ಆಗಿದ್ದರೂ ಇದರ ವಸ್ತು ಮಕ್ಕಳಿಗಳಿಂತ ಹೆಚ್ಚಾಗಿ ದೊಡ್ಡವರಿಗೇ ಅನ್ವಯವಾಗುವಂತಿದೆ. ಮೌನೇಶ ಬಡಿಗೇರರು ಇದನ್ನು ಉತ್ತರಕರ್ನಾಟಕದ ಭಾಷೆಗೆ ತಂದು ಕನ್ನಡದ ನಾಟಕವೇ ಎನ್ನುವಷ್ಟು ರೂಪಾಂತರಿಸಿದ್ದಾರೆ. ಇದರ ಪ್ರಯೋಗದ ಹೊಸ ಹೊಸ ಸಾಧ್ಯತೆಗಳನ್ನು ಕನ್ನಡ ರಂಗಭೂಮಿ ಇನ್ನೂ ಶೋಧಿಸಬೇಕಿದೆ.
Interested readers may write to us at mup@manipal.edu about purchasing the book.
Also available on

-
Bhashantara Jijnase, Pratyakshike
₹395.00Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on










