Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Aparichita
Translator: Prakash Nayakತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on
-
Daddal Kaadina Mouna
Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
Sangeetashastragranthachandrike Volume-2
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
-
Bhashantara Jijnase, Pratyakshike
Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on
-
Grama Sannidhya
ಗ್ರಾಮ ಸಾನ್ನಿಧ್ಯAuthor: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Inti Dvadasha Akhyana
Author: Sathyavathi Harikrishnan
ಸತ್ಯವತಿ ಹರಿಕೃಷ್ಣನ್ ಹಾಸ್ಯಬರವಣಿಗೆಯಲ್ಲಿ ಸುಮಾರು ಎರಡು ದಶಕಗಳಿಂದ ತನ್ನನ್ನು ತೊಡಗಿಸಿಕೊಂಡಿರುವ ಕವಯಿತ್ರಿ. ಇವರ ಹಾಸ್ಯಲೇಖನಗಳು ತರಂಗ, ತುಷಾರ, ಮಯೂರ, ಕರ್ಮವೀರದಂಥ ನಿಯತಕಾಲಿಕಗಳಲ್ಲಿ, ಉದಯವಾಣಿ, ಪ್ರಜಾವಾಣಿ ಮುಂತಾದವುಗಳಲ್ಲಿಯೂ ಪ್ರಕಟಗೊಂಡಿವೆ. 2002ರಲ್ಲಿ ಡೆಟ್ರಾಯಿಟ್ ನಲ್ಲಿ ನಡೆದ “ಅಕ್ಕ” ವಿಶ್ವ ಕನ್ನಡ ಸಮ್ಮೇಳನದ ಸ್ಮರಣ ಸಂಚಿಕೆಯಲ್ಲಿ ಇವರ “ಗುಂಡ್ರಾಮನ ಚಿಕಿತ್ಸಾಯಣ’ ಎಂಬ ಕೃತಿ ಪ್ರಕಟವಾಗಿದೆ. ಸನ್ಮಾನ್ಯರಾದ ದೇಜಗೌ ಮತ್ತು ಜಿಟಿನಾರವರ ಸಂಪಾದಕತ್ವದಲ್ಲಿ ಪ್ರಕಟವಾದ “ಪುಸ್ತಕ ಪ್ರಪಂಚ’ದಲ್ಲಿ ಇವರ ಅನುವಾದಿತ ಲೇಖನಗಳು ಪಡಿಮೂಡಿವೆ. “ಕುಂಬಾಸ’, “ನುಗ್ಗೇಹಳ್ಳಿ ಪಂಕಜ’ವೇ ಮೊದಲಾದ ಪ್ರಶಸ್ತಿಗಳನ್ನು ಪಡೆದಿರುವ ಸತ್ಯವತಿಯವರು ಈಗಾಗಲೇ ಐದು ಹಾಸ್ಯ ಸಂಕಲನಗಳನ್ನು ರಚಿಸಿದ್ದಾರೆ. ಅವರ ಆರನೆಯ ಹಾಸ್ಯ ಸಂಕಲನವೇ – “ಇಂತಿ ದ್ವಾದಶ ಆಖ್ಯಾನ’. ಹಾಸ್ಯದಲ್ಲಿ ಅಪಹಾಸ್ಯ, ತಿಳಿಹಾಸ್ಯ, ವ್ಯಂಗ್ಯ ಮುಂತಾದ ಪ್ರಭೇದಗಳಿವೆ. ವ್ಯಂಗ್ಯಮಿಶ್ರಿತವಾದ ತಿಳಿಹಾಸ್ಯ ಒಂದೇ ಕಾಲದಲ್ಲಿ ಎರಡು ಉದ್ದೇಶಗಳನ್ನು ಹೊಂದಿರುತ್ತವೆ. ಅದು ಮೇಲ್ನೋಟಕ್ಕೆ ಮನೋರಂಜನೆಯಾಗಿ ಕಂಡರೂ, ಅದರ ಇಂಗಿತ ಓದುಗರನ್ನು ಗಂಭೀರ ಚಿಂತನೆಗೆ ತೊಡಗುವಂತೆ ಮಾಡುವುದಾಗಿರುತ್ತದೆ. ವ್ಯಕ್ತಿಯನ್ನು ನೋಯಿಸದೇ ಲಘುಹಾಸ್ಯ-ವ್ಯಂಗ್ಯಗಳಿಂದ ಸ್ವವಿಮರ್ಶೆ ಮಾಡಿಕೊಳ್ಳುವಂತೆ ಪ್ರೇರೇಪಿಸುವುದು ಹಾಸ್ಯದ ಕಲಾತ್ಮಕ ಪ್ರಕ್ರಿಯೆ. ಶ್ರೀಮತಿ ಸತ್ಯವತಿಯವರ ಈ ಕೃತಿಯಲ್ಲಿ ಇಂತಹ ಒಂದು ಪ್ರಯತ್ನವನ್ನು ನಾವು ಕಾಣಬಹುದು. “ಇಂತಿ ದ್ವಾದಶ ಆಖ್ಯಾನ’ದಲ್ಲಿ ಹನ್ನೆರಡು ವೈವಿಧ್ಯಮಯ ಸಣ್ಣ ಹಾಸ್ಯಲೇಖನಗಳಿವೆ. ಸತ್ಯವತಿಯವರು ನಮ್ಮ ಜೀವನದ ಸಾಮಾನ್ಯ ಘಟನೆಗಳನ್ನೇ ರಂಗುರಂಗಾಗಿ ತಿಳಿಹಾಸ್ಯದ ಮೂಲಕ ಈ ಕೃತಿಯಲ್ಲಿ ತೋರಿಸಿದ್ದಾರೆ. ಕಾಲ್ಪನಿಕ ಘಟನೆಗಳಲ್ಲಿ ಹಾಸ್ಯದ ಪಾತ್ರಗಳನ್ನು ಸೃಷ್ಟಿಸಿ, ಗಂಭೀರ ವಿಚಾರಗಳನ್ನು ಮನಮುಟ್ಟುವಂತೆ ನಿರೂಪಿಸುವ ಲೇಖಕಿಯ ಶೈಲಿಯು ಅಪೂರ್ವವಾದದ್ದು. ಪ್ರತಿ ಕತೆಯ ಶೀರ್ಷಿಕೆಯಲ್ಲೇ ಹಾಸ್ಯ ತುಂಬಿರುವ ಈ ಕೃತಿಯು ಓದುಗರನ್ನು ನಗಿಸುವಲ್ಲಿ ಯಶಸ್ವಿಯಾಗುತ್ತದೆ.
Interested customers may write to us at mup@manipal.edu about purchasing the book.
Also available on
-
Gombi Maduvi
Author: Revati Nadgir
ಉತ್ತರ ಕರ್ನಾಟಕದ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಈ ಕೃತಿಯಲ್ಲಿ ಬಡ, ಮುಗ್ಧ ಹುಡುಗಿಯೊಬ್ಬಳ ಕನಸುಗಳು, ಮಾನವೀಯತೆಯನ್ನು ಮೆರೆಯುವ ಹಲವು ಪಾತ್ರಗಳ ನಡುವೆ ವಿಧಿಯ ಕೈವಾಡದಿಂದ ಚದುರಿ ಹೋಗುವ, ಅಂತಃಕರಣವನ್ನು ಕಲಕುವ ಚಿತ್ರಣವಿದೆ. ಸ್ಥಳೀಯ ನಂಬಿಕೆ-ಆಚರಣೆ, ಆಶೋತ್ತರಗಳನ್ನು ದಟ್ಟವಾಗಿ ಹೆಣೆದುಕೊಳ್ಳುತ್ತ ಒಂದು ಪುಟ್ಟ ವಿಶ್ವವನ್ನೇ ಈ ನಾಟಕ ಸೃಷ್ಟಿಸುತ್ತದೆ. ರೇವತಿ ನಾಡಗೀರ ಅವರ ಚೊಚ್ಚಲ ಕೃತಿಯಾದ ಇದರಲ್ಲಿ, ಅವರ ಸಹೃದಯತೆ, ಉತ್ತರ ಕರ್ನಾಟಕದ ಸಂಸ್ಕೃತಿಯ ಅನುಭವ ಎದ್ದು ಕಾಣುತ್ತದೆ.
Interested customers may write to us at mup@manipal.edu about purchasing the book.
Also available on
-
Phedra
Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.