Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Sangeetashastragranthachandrike Volume-2
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
-
Nanna Parni Shaale
Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on
eBook available on
-
Daddal Kaadina Mouna
Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
The Prince
Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on
-
Wodeyara Kaalada Mysurina Adalitha matthu Saamajika Ithihasa
Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Udupi – Manipal: A Pictorial Journey
Author: Astro Mohan
This picturesque book celebrates the history and life of Udupi and Manipal and takes the reader on a photographic tour. Most breath-taking locales are presented with rich, full-colour images taken by Astro Mohan. These images, combined with redolent text, in both English and Kannada, illustrates a plethora of visual wonders: ancient megaliths, scenic islands, magnificent artwork, white-sand seashores, rainforests, and both classic and innovative architecture. Loaded with information for each location, it is the perfect travel partner and comprehensive guide for an enriching and authentic travel experience in Udupi-Manipal. Experience well-known festivals such as Ganesh Chaturthi to lesser-known cultural fiestas like Bhootharadhane and Dollu Kunita or architectural wonders like the Kalluchappara or Katale Basadi with this. Immerse yourself in the temple city of Udupi and the cosmopolitan town of Manipal with this book. Begin your journey now!
Interested customers may write to us at mup@manipal.edu about purchasing the book.
Also available on
-
Kannadadalli Patthyaparishkarana- Ondu Kaipidi
Author: N T Bhat
ಸ್ವಾನುಭವವಷ್ಟನ್ನೇ ಬಂಡವಾಳವಾಗಿರಿಸಿಕೊಂಡು ತೊಡಗಿದ ಉದ್ಯಮ ಈ ಹೊತ್ತಗೆಯ ರಚನೆ. ಕನ್ನಡದಲ್ಲಿ ಕರಡಚ್ಚು ಪ್ರತಿಗಳನ್ನು ತಿದ್ದಿಕೊಟ್ಟ ಅನುಭವಗಳನ್ನು ತುಸು ವಿಸ್ತರಿಸಿ ಸಣ್ಣ ಕೈಪಿಡಿಯ ರೂಪದಲ್ಲಿ ತಂದರೆ ಒಳ್ಳೆಯದಲ್ಲವೇ ಎಂಬ ಆಲೋಚನೆ ಈ ಕಿರುಹೊತ್ತಗೆಯ ರಚನೆಯ ಮೂಲ. -ಎನ್. – ತಿರುಮಲೇಶ್ವರ ಭಟ್ಟ ಡಾ. ತಿರುಮಲೇಶ್ವರ ಭಟ್ಟರು ದೀರ್ಘಕಾಲ ಅನುವಾದಕ್ಷೇತ್ರದಲ್ಲಿ (ಇಂಗ್ಲಿಷ್ನಿಂದ ಕನ್ನಡಕ್ಕೆ, ಕನ್ನಡದಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಕನ್ನಡಕ್ಕೆ) ದುಡಿದವರು ಮತ್ತು ವಿವಿಧ ರೀತಿಯ ಪುಸ್ತಕಗಳ ಯೋಜನೆ, ಸಂಯೋಜನೆ, ಪುನರ್ನಿರೂಪಣೆ, ಸಂಪಾದನೆ ಮೊದಲಾದ ಕೆಲಸಗಳನ್ನು ಮಾಡಿದವರು. ಈಯೆಲ್ಲ ಕೆಲಸಗಳಲ್ಲಿ ಸತತವಾಗಿ ಒಳಗೊಂಡಿರುವುದು ಕರಡಚ್ಚು ತಿದ್ದುವ ಕೆಲಸ. ಯಾವುದೇ ಕಾರ್ಯಕ್ರಮದಲ್ಲಿದ್ದರೂ ಅದರ ಎಡೆಯೆಡೆಯ ಬಿಡುವಿನಲ್ಲಿ ಒಂದಿಷ್ಟು ಕರಡಚ್ಚು ತಿದ್ದುವ ಕೆಲಸವನ್ನು ಸತತವಾಗಿ ಮಾಡುತ್ತಲೇ ಬಂದವರು. ಪಠ್ಯಪರಿಷ್ಕರಣದ ಹಲವು ಹಂತಗಳನ್ನು ಚೆನ್ನಾಗಿ ಬಲ್ಲ ಅವರು ತಮ್ಮಲ್ಲಿರುವ ಮಾಹಿತಿಯನ್ನೂ ಅನುಭವವನ್ನೂ ಕ್ರೋಡೀಕರಿಸಿ ಕನ್ನಡದಲ್ಲಿ ಪಠ್ಯಪರಿಷ್ಕರಣದ ಆವಶ್ಯಕತೆಯೇನೆಂಬುದು ಸರಳವಾಗಿ ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ. ಅವರಿಂದ ಭಾಷಾಕ್ಷೇತ್ರಕ್ಕೆ ಇನ್ನಷ್ಟು ಸೇವೆ ಸಲ್ಲಲಿ ಎಂಬುದು ಮನದಾಳದ ಆಶಯ. – ಪಾದೇಕಲ್ಲು ವಿಷ್ಣು ಭಟ್ಟ.
Interested readers may write to us at mup@manipal.edu about purchasing the book.
Also available on
-
Saamajika Samanvayada Harikara – Kanaka Dasaru
Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.