Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Bhagavantana Kandammagalu
Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on
-
Kempu Kanagile and Chitra
Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Bhashantara Jijnase, Pratyakshike
Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on
-
Dodda Samagara Nalmoga
Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
-
Grama Sannidhya
ಗ್ರಾಮ ಸಾನ್ನಿಧ್ಯAuthor: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Kannadadalli Patthyaparishkarana- Ondu Kaipidi
Author: N T Bhat
ಸ್ವಾನುಭವವಷ್ಟನ್ನೇ ಬಂಡವಾಳವಾಗಿರಿಸಿಕೊಂಡು ತೊಡಗಿದ ಉದ್ಯಮ ಈ ಹೊತ್ತಗೆಯ ರಚನೆ. ಕನ್ನಡದಲ್ಲಿ ಕರಡಚ್ಚು ಪ್ರತಿಗಳನ್ನು ತಿದ್ದಿಕೊಟ್ಟ ಅನುಭವಗಳನ್ನು ತುಸು ವಿಸ್ತರಿಸಿ ಸಣ್ಣ ಕೈಪಿಡಿಯ ರೂಪದಲ್ಲಿ ತಂದರೆ ಒಳ್ಳೆಯದಲ್ಲವೇ ಎಂಬ ಆಲೋಚನೆ ಈ ಕಿರುಹೊತ್ತಗೆಯ ರಚನೆಯ ಮೂಲ. -ಎನ್. – ತಿರುಮಲೇಶ್ವರ ಭಟ್ಟ ಡಾ. ತಿರುಮಲೇಶ್ವರ ಭಟ್ಟರು ದೀರ್ಘಕಾಲ ಅನುವಾದಕ್ಷೇತ್ರದಲ್ಲಿ (ಇಂಗ್ಲಿಷ್ನಿಂದ ಕನ್ನಡಕ್ಕೆ, ಕನ್ನಡದಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಕನ್ನಡಕ್ಕೆ) ದುಡಿದವರು ಮತ್ತು ವಿವಿಧ ರೀತಿಯ ಪುಸ್ತಕಗಳ ಯೋಜನೆ, ಸಂಯೋಜನೆ, ಪುನರ್ನಿರೂಪಣೆ, ಸಂಪಾದನೆ ಮೊದಲಾದ ಕೆಲಸಗಳನ್ನು ಮಾಡಿದವರು. ಈಯೆಲ್ಲ ಕೆಲಸಗಳಲ್ಲಿ ಸತತವಾಗಿ ಒಳಗೊಂಡಿರುವುದು ಕರಡಚ್ಚು ತಿದ್ದುವ ಕೆಲಸ. ಯಾವುದೇ ಕಾರ್ಯಕ್ರಮದಲ್ಲಿದ್ದರೂ ಅದರ ಎಡೆಯೆಡೆಯ ಬಿಡುವಿನಲ್ಲಿ ಒಂದಿಷ್ಟು ಕರಡಚ್ಚು ತಿದ್ದುವ ಕೆಲಸವನ್ನು ಸತತವಾಗಿ ಮಾಡುತ್ತಲೇ ಬಂದವರು. ಪಠ್ಯಪರಿಷ್ಕರಣದ ಹಲವು ಹಂತಗಳನ್ನು ಚೆನ್ನಾಗಿ ಬಲ್ಲ ಅವರು ತಮ್ಮಲ್ಲಿರುವ ಮಾಹಿತಿಯನ್ನೂ ಅನುಭವವನ್ನೂ ಕ್ರೋಡೀಕರಿಸಿ ಕನ್ನಡದಲ್ಲಿ ಪಠ್ಯಪರಿಷ್ಕರಣದ ಆವಶ್ಯಕತೆಯೇನೆಂಬುದು ಸರಳವಾಗಿ ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ. ಅವರಿಂದ ಭಾಷಾಕ್ಷೇತ್ರಕ್ಕೆ ಇನ್ನಷ್ಟು ಸೇವೆ ಸಲ್ಲಲಿ ಎಂಬುದು ಮನದಾಳದ ಆಶಯ. – ಪಾದೇಕಲ್ಲು ವಿಷ್ಣು ಭಟ್ಟ.
Interested readers may write to us at mup@manipal.edu about purchasing the book.
Also available on
-
Gombi Maduvi
Author: Revati Nadgir
ಉತ್ತರ ಕರ್ನಾಟಕದ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಈ ಕೃತಿಯಲ್ಲಿ ಬಡ, ಮುಗ್ಧ ಹುಡುಗಿಯೊಬ್ಬಳ ಕನಸುಗಳು, ಮಾನವೀಯತೆಯನ್ನು ಮೆರೆಯುವ ಹಲವು ಪಾತ್ರಗಳ ನಡುವೆ ವಿಧಿಯ ಕೈವಾಡದಿಂದ ಚದುರಿ ಹೋಗುವ, ಅಂತಃಕರಣವನ್ನು ಕಲಕುವ ಚಿತ್ರಣವಿದೆ. ಸ್ಥಳೀಯ ನಂಬಿಕೆ-ಆಚರಣೆ, ಆಶೋತ್ತರಗಳನ್ನು ದಟ್ಟವಾಗಿ ಹೆಣೆದುಕೊಳ್ಳುತ್ತ ಒಂದು ಪುಟ್ಟ ವಿಶ್ವವನ್ನೇ ಈ ನಾಟಕ ಸೃಷ್ಟಿಸುತ್ತದೆ. ರೇವತಿ ನಾಡಗೀರ ಅವರ ಚೊಚ್ಚಲ ಕೃತಿಯಾದ ಇದರಲ್ಲಿ, ಅವರ ಸಹೃದಯತೆ, ಉತ್ತರ ಕರ್ನಾಟಕದ ಸಂಸ್ಕೃತಿಯ ಅನುಭವ ಎದ್ದು ಕಾಣುತ್ತದೆ.
Interested customers may write to us at mup@manipal.edu about purchasing the book.
Also available on
-
Aparichita
Translator: Prakash Nayakತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on