Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Tapaalu Mani
₹140.00Author: Rabhindranath Tagore, Translator: Mounesh Badiger
ರಾಷ್ಟ್ರಕವಿ ರವೀಂದ್ರನಾಥ ಠಾಕೂರರ ‘ಡಾಕ್ ಘರ್’ ಬಹಳ ಪ್ರಸಿದ್ಧ ನಾಟಕ. ಮಗುವಿನ ಮನೋದೈಹಿಕ ಸಾಧ್ಯತೆಗಳನ್ನು ಕಲೆಯ ಸೂಕ್ಷ್ಮಕಣ್ಣಿನಿಂದ ನೋಡುವ ಎರಡಂಕದ ಪುಟ್ಟ ನಾಟಕವಿದು. ಇದು ಸೃಷ್ಟಿಸುವ ಮಾಯಾವಾಸ್ತವ ಬಹಳ ಅಪರೂಪವಾದದ್ದು. ಇದರ ಮುಖ್ಯ ಪಾತ್ರ ಮಗುವೇ ಆಗಿದ್ದರೂ ಇದರ ವಸ್ತು ಮಕ್ಕಳಿಗಳಿಂತ ಹೆಚ್ಚಾಗಿ ದೊಡ್ಡವರಿಗೇ ಅನ್ವಯವಾಗುವಂತಿದೆ. ಮೌನೇಶ ಬಡಿಗೇರರು ಇದನ್ನು ಉತ್ತರಕರ್ನಾಟಕದ ಭಾಷೆಗೆ ತಂದು ಕನ್ನಡದ ನಾಟಕವೇ ಎನ್ನುವಷ್ಟು ರೂಪಾಂತರಿಸಿದ್ದಾರೆ. ಇದರ ಪ್ರಯೋಗದ ಹೊಸ ಹೊಸ ಸಾಧ್ಯತೆಗಳನ್ನು ಕನ್ನಡ ರಂಗಭೂಮಿ ಇನ್ನೂ ಶೋಧಿಸಬೇಕಿದೆ.
Interested readers may write to us at mup@manipal.edu about purchasing the book.
Also available on

-
Dodda Samagara Nalmoga
₹350.00Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
-
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on

-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.









