Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Ati Sannakathe: Swarupa, Siddhi Mattu Sadhyate
Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.
Also available on
eBook available on
-
Wodeyara Kaalada Mysurina Adalitha matthu Saamajika Ithihasa
Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Grama Sannidhya
ಗ್ರಾಮ ಸಾನ್ನಿಧ್ಯAuthor: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Chandrayana
Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Sangeetha Lokadrishti
Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
-
Saamajika Samanvayada Harikara – Kanaka Dasaru
Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Madhavi Kathana Kavya
Author: ONV Kurup Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on
-
Mahila Mahabharatha
Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on