Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Related products
-
Ati Sannakathe: Swarupa, Siddhi Mattu Sadhyate
Author: T P Ashoka Translator: Prakash Nayak
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.
Also available on
eBook available on
-
Aparichita
Translator: Prakash Nayakತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on
-
Saamajika Samanvayada Harikara – Kanaka Dasaru
Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Kempu Kanagile and Chitra
Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Phedra
Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
-
Bhashantara Jijnase, Pratyakshike
Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on
-
MOMO
Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Sangita Lokadrishti
Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.