Puttakkana Highway
₹350.00
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
Related products
-
Daddal Kaadina Mouna
₹240.00Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
-
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on

-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Grama Sannidhya
ಗ್ರಾಮ ಸಾನ್ನಿಧ್ಯ₹300.00Author: Krishna Kothai
ಗ್ರಾಮ ಭಾರತವೇ ನೈಜ ಭಾರತವೆಂಬ ಉಕ್ತಿಯೊಂದಿದೆ. ಈ ಉಕ್ತಿ ಅತಿಶಯೋಕ್ತಿಯಲ್ಲ. ಪಂಜಾಬ ಸಿಂಧ, ಗುಜರಾತ, ಮರಾಠ, ದ್ರಾವಿಡ, ಉತ್ಕಲ, ವಂಗ ಎನ್ನುವಾಗ ಅಥವಾ ಸುಜಲಾಂ, ಸುಫಲಾಂ, ಮಲಯಜ ಶೀತಲಾಂ, ಸಸ್ಯಶಾಮಲಾಂ, ಮಾತರಂ… ವಂದೇ ಮಾತರಂ ಎನ್ನುವಾಗ ನಮ್ಮ ಕಣ್ಣೆದುರು ಬಂದು ನಿಲ್ಲುವುದು ಭಾರತದ ವೈವಿಧ್ಯಪೂರ್ಣ ಗ್ರಾಮಗಳು, ಅಲ್ಲಿನ ಜನ-ಅವರ ಜನಜೀವನ. ಬದಲಾದ ಹಾಗೂ ಬದಲಾಗುತ್ತಿರುವ ಭಾರತೀಯ ಸಂದರ್ಭದಲ್ಲಿ, ಕೊಳ್ಳುಬಾಕ, ನಗರೀಕೃತ ನಾಗರೀಕತೆ, ಗ್ರಾಮೀಣ ಬದುಕಿಗಿಂತ ಶ್ರೇಷ್ಠವಾದುದೆಂಬ ಒಂದು ಸಿದ್ಧಾಂತ ಯುವಪೀಳಿಗೆಯನ್ನು ಅನಾವಶ್ಯಕ ಅನುಮಾನಗಳಿಗೆ ತಳ್ಳುತ್ತಿದೆ. ಇದೊಂದು ಅರೆಬೆಂದ ಚಿಂತನೆ. ಭೂತಾನದಂತಹ ರಾಷ್ಟ್ರಗಳಲ್ಲಿ ಮನುಷ್ಯನ ಸಂತೋಷ- ಸಂತೃಪ್ತಿಯನ್ನು ಅವನ ಅಭಿವೃದ್ಧಿ ಮಾಪನವಾಗಿ ಬಳಸಲಾಗುತ್ತಿದೆ. ಈ ತೆರನಾದ ಅಭಿವೃದ್ಧಿ ಪ್ರಕೃತಿ ಸಹ್ಯ ಗ್ರಾಮೀಣ ವಾತಾವರಣದಲ್ಲಷ್ಟೇ ಸಾಧ್ಯ-ಷಹರಗಳಲ್ಲಿ ಅಲ್ಲ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಪುಸ್ತಕವನ್ನು ರಚಿಸಲಾಗಿದೆ. ಅಂತಿಮವಾಗಿ ಅಭಿವೃದ್ಧಿ’ ಎಂಬ ಪದದ ನಿಜಾರ್ಥವೇನೆಂಬ ಪ್ರಶ್ನೆ’ ಪುಸ್ತಕದುದ್ದಕ್ಕೂ ಕಾಡುತ್ತ ಹೋಗುತ್ತದೆ. ಹಲವು ವರ್ಷಗಳಿಂದ ಲೇಖಕನನ್ನು ಕಾಡುತ್ತ ಬಂದ ಪ್ರಶ್ನೆ’, ಪುಸ್ತಕದ ವಿವಿಧ ಅಧ್ಯಾಯಗಳಲ್ಲಿ ತಲೆ ಎತ್ತಿ, ಗೊಂದಲ ಸೃಷ್ಟಿಸುತ್ತವೆ. ಸುಮಾರು ಆರು ದಶಕಗಳಿಗೂ ಹೆಚ್ಚಿನ ಗ್ರಾಮೀಣ ನೆಲದ ಸಂಪರ್ಕ, ವಿಶಿಷ್ಟ ಅನುಭವಗಳು, ಅಪಾರ ಸಂದೇಶಗಳನ್ನು ಪುಸ್ತಕದಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಬದುಕಿನ ಅನನ್ಯತೆಯನ್ನು ಅನಾವರಣಗೊಳಿಸುವ ಕಾಯಕವನ್ನು ಈ ಪುಸ್ತಕದಲ್ಲಿ ಮಾಡಲಾಗಿದೆ. ಐವತ್ತನೆಯ ದಶಕದ ಗ್ರಾಮೀಣ ಬದುಕನ್ನು, ಅಂದಗಾರಿನ ಊರು, ದೇವಸ್ಥಾನ, ಶಾಲೆ, ಗ್ರಾಮೀಣರು, ಅವರ ಬದುಕಿನ ಪರಿ, ಜೀವನಾನುಭವ, ಸ್ನೇಹ ಭಾವ, ಸಜ್ಜನಿಕೆ, ತೃಪ್ತ ಜೀವನ ಇನ್ನಿತರ ವಿವರಗಳೊಡನೆ ದಾಖಲಿಸಲಾಗಿದೆ. ಅದಕ್ಕೆ ಪರ್ಯಯವಾಗಿ, ಬದಲಾದ ಇಂದಿನ ಅಂದಗಾರನ್ನು (2020) ಚಿತ್ರಿಸಲಾಗಿದೆ. ಇದರ ನಡುವೆ ರಾಜ್ಯದ ಬೇರೆ ರಾಷ್ಟ್ರಗಳ ಗ್ರಾಮೀಣ ಬದುಕಿನ ವಿವರಗಳನ್ನು ಕೊಡಲಾಗಿದೆ. ಲೇಖಕನ ಬದುಕಿನಲ್ಲಿ ಹಾದು ಹೋದ ಗ್ರಾಮವರೇಣ್ಯರ ನೆನಪು ಈ ಪುಸ್ತಕದಲ್ಲಿದೆ. ಗಾಂಧೀಜಿ ಪ್ರಣೀತ ಪ್ರಕೃತಿಯೊಡನೆ ಸದಾ ಅನುಸಂಧಾನದಲ್ಲಿರುವ, ಸ್ನೇಹ, ಸಹೃದಯತೆ ಸದಾಚಾರ, ಸಹಬಾಳ್ವೆ, ಸಂತೃಪ್ತಿಯ ತಂಗುದಾಣಗಳಾದ ಸಹಸ್ರಾರು ಹಳ್ಳಿಗಳ ರೂಪಕವೊಂದನ್ನು ಒದಗಿಸುವ ಪ್ರಾಮಾಣಿಕ ಪ್ರಯತ್ನ ‘ಗ್ರಾಮ ಸಾನ್ನಿಧ್ಯ’ ಕೃತಿಯಲ್ಲಿದೆ.
Interested overseas customers may write to us at mup@manipal.edu about purchasing the book.
-
Phedra
₹180.00Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
-
Ati Sannakathe: Swarupa, Siddhi Mattu Sadhyate
₹160.00Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.”
Interested readers may write to us at mup@manipal.edu about purchasing the book.
Also available on

eBook available on

-
Sangeetashastragranthachandrike Volume-2
₹650.00Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
Also available on

-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.










Be the first to review “Puttakkana Highway”
You must be logged in to post a review.