Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Categories: | Indian Regional Languages, Kannada |
|---|
Related products
-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Madhavi Kathana Kavya
₹195.00Author: ONV Kurup Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on

-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Vaidehi Dhvani
₹275.00Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on

-
Daddal Kaadina Mouna
₹240.00Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
Sangeetha Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on
















