Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
Categories: | Indian Regional Languages, Kannada |
---|
Related products
-
Chandrayana
Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Tapaalu Mani
Author: Rabhindranath Tagore, Translator: Mounesh Badiger
ರಾಷ್ಟ್ರಕವಿ ರವೀಂದ್ರನಾಥ ಠಾಕೂರರ ‘ಡಾಕ್ ಘರ್’ ಬಹಳ ಪ್ರಸಿದ್ಧ ನಾಟಕ. ಮಗುವಿನ ಮನೋದೈಹಿಕ ಸಾಧ್ಯತೆಗಳನ್ನು ಕಲೆಯ ಸೂಕ್ಷ್ಮಕಣ್ಣಿನಿಂದ ನೋಡುವ ಎರಡಂಕದ ಪುಟ್ಟ ನಾಟಕವಿದು. ಇದು ಸೃಷ್ಟಿಸುವ ಮಾಯಾವಾಸ್ತವ ಬಹಳ ಅಪರೂಪವಾದದ್ದು. ಇದರ ಮುಖ್ಯ ಪಾತ್ರ ಮಗುವೇ ಆಗಿದ್ದರೂ ಇದರ ವಸ್ತು ಮಕ್ಕಳಿಗಳಿಂತ ಹೆಚ್ಚಾಗಿ ದೊಡ್ಡವರಿಗೇ ಅನ್ವಯವಾಗುವಂತಿದೆ. ಮೌನೇಶ ಬಡಿಗೇರರು ಇದನ್ನು ಉತ್ತರಕರ್ನಾಟಕದ ಭಾಷೆಗೆ ತಂದು ಕನ್ನಡದ ನಾಟಕವೇ ಎನ್ನುವಷ್ಟು ರೂಪಾಂತರಿಸಿದ್ದಾರೆ. ಇದರ ಪ್ರಯೋಗದ ಹೊಸ ಹೊಸ ಸಾಧ್ಯತೆಗಳನ್ನು ಕನ್ನಡ ರಂಗಭೂಮಿ ಇನ್ನೂ ಶೋಧಿಸಬೇಕಿದೆ.
Interested readers may write to us at mup@manipal.edu about purchasing the book.
Also available on
-
Kannadadalli Patthyaparishkarana- Ondu Kaipidi
Author: N T Bhat
ಸ್ವಾನುಭವವಷ್ಟನ್ನೇ ಬಂಡವಾಳವಾಗಿರಿಸಿಕೊಂಡು ತೊಡಗಿದ ಉದ್ಯಮ ಈ ಹೊತ್ತಗೆಯ ರಚನೆ. ಕನ್ನಡದಲ್ಲಿ ಕರಡಚ್ಚು ಪ್ರತಿಗಳನ್ನು ತಿದ್ದಿಕೊಟ್ಟ ಅನುಭವಗಳನ್ನು ತುಸು ವಿಸ್ತರಿಸಿ ಸಣ್ಣ ಕೈಪಿಡಿಯ ರೂಪದಲ್ಲಿ ತಂದರೆ ಒಳ್ಳೆಯದಲ್ಲವೇ ಎಂಬ ಆಲೋಚನೆ ಈ ಕಿರುಹೊತ್ತಗೆಯ ರಚನೆಯ ಮೂಲ. -ಎನ್. – ತಿರುಮಲೇಶ್ವರ ಭಟ್ಟ ಡಾ. ತಿರುಮಲೇಶ್ವರ ಭಟ್ಟರು ದೀರ್ಘಕಾಲ ಅನುವಾದಕ್ಷೇತ್ರದಲ್ಲಿ (ಇಂಗ್ಲಿಷ್ನಿಂದ ಕನ್ನಡಕ್ಕೆ, ಕನ್ನಡದಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಕನ್ನಡಕ್ಕೆ) ದುಡಿದವರು ಮತ್ತು ವಿವಿಧ ರೀತಿಯ ಪುಸ್ತಕಗಳ ಯೋಜನೆ, ಸಂಯೋಜನೆ, ಪುನರ್ನಿರೂಪಣೆ, ಸಂಪಾದನೆ ಮೊದಲಾದ ಕೆಲಸಗಳನ್ನು ಮಾಡಿದವರು. ಈಯೆಲ್ಲ ಕೆಲಸಗಳಲ್ಲಿ ಸತತವಾಗಿ ಒಳಗೊಂಡಿರುವುದು ಕರಡಚ್ಚು ತಿದ್ದುವ ಕೆಲಸ. ಯಾವುದೇ ಕಾರ್ಯಕ್ರಮದಲ್ಲಿದ್ದರೂ ಅದರ ಎಡೆಯೆಡೆಯ ಬಿಡುವಿನಲ್ಲಿ ಒಂದಿಷ್ಟು ಕರಡಚ್ಚು ತಿದ್ದುವ ಕೆಲಸವನ್ನು ಸತತವಾಗಿ ಮಾಡುತ್ತಲೇ ಬಂದವರು. ಪಠ್ಯಪರಿಷ್ಕರಣದ ಹಲವು ಹಂತಗಳನ್ನು ಚೆನ್ನಾಗಿ ಬಲ್ಲ ಅವರು ತಮ್ಮಲ್ಲಿರುವ ಮಾಹಿತಿಯನ್ನೂ ಅನುಭವವನ್ನೂ ಕ್ರೋಡೀಕರಿಸಿ ಕನ್ನಡದಲ್ಲಿ ಪಠ್ಯಪರಿಷ್ಕರಣದ ಆವಶ್ಯಕತೆಯೇನೆಂಬುದು ಸರಳವಾಗಿ ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ. ಅವರಿಂದ ಭಾಷಾಕ್ಷೇತ್ರಕ್ಕೆ ಇನ್ನಷ್ಟು ಸೇವೆ ಸಲ್ಲಲಿ ಎಂಬುದು ಮನದಾಳದ ಆಶಯ. – ಪಾದೇಕಲ್ಲು ವಿಷ್ಣು ಭಟ್ಟ.
Interested readers may write to us at mup@manipal.edu about purchasing the book.
Also available on
-
Puttakkana Highway
ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
-
Kempu Kanagile and Chitra
Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Sangeetha Lokadrishti
Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
-
Vaidehi Dhvani
Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on
-
Bhashantara Jijnase, Pratyakshike
Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on