Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Categories: | Indian Regional Languages, Kannada |
|---|
Related products
-
Aparichita
₹170.00Translator: Prakash Nayakತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on

-
Vaidehi Dhvani
₹275.00Author: Vaidehi
ಪ್ರಸ್ತುತ ಪುಸ್ತಕವು ಮುಂದಿನ ಕಾಲಕ್ಕೆ ವೈದೇಹಿಯವರ ಧ್ವನಿ ಮತ್ತು ನಿರೂಪಣೆಯನ್ನು ದಾಖಲಿಸುವ ಪ್ರಯತ್ನವಾಗಿದೆ. ಅವರ ಕಥೆಗಳ ನಿರೂಪಣೆಯು ಕುಂದಾಪುರದ ಆಡುಭಾಷೆಯ ಶ್ರೀಮಂತಿಕೆಯಲ್ಲಿ ಮತ್ತು ಅದರಾಚೆಗೆ ಕನ್ನಡದ ಸಂಸ್ಕೃತಿಯೊಂದಿಗೆ ಏಕತೆಯ ಭಾವನೆಯೊಂದಿಗೆ ಎತ್ತರದಲ್ಲಿದೆ. ಐದು ಕಥೆಗಳು ಮತ್ತು ಏಳು ಕವಿತೆಗಳ ಈ ಪುಸ್ತಕವನ್ನು ಅವರು ಓದಿದ್ದಾರೆ. ಈ ಆಯ್ದ ಕಥೆಗಳು ಈಗಾಗಲೇ ಪ್ರಕಟವಾದವುಗಳಾಗಿವೆ ಆದರೆ ಅದನ್ನು ವಿಭಿನ್ನವಾಗಿಸುವುದು ಅವುಗಳನ್ನು ಓದುವ ವಿಧಾನವಾಗಿದೆ. ಪ್ರತಿ ಪದ, ಪ್ರತಿ ವಿರಾಮಚಿಹ್ನೆ, ಪ್ರತಿ ವಿರಾಮ, ಅವರ ಧ್ವನಿಯಲ್ಲಿ ತುಂಬಾ ವಿಭಿನ್ನವಾಗಿದೆ. “ವೈದೇಹಿ ಧ್ವನಿ” ಎಂಬ ಹೆಸರನ್ನು ಅವರ ಧ್ವನಿಯ ನಾದದ ಗುಣಮಟ್ಟವನ್ನು ಪ್ರತಿನಿಧಿಸಲು ನೀಡಲಾಗಿದೆ ಆದರೆ ಅದು ಕೇಳುಗ ಅಥವಾ ಓದುಗನಲ್ಲಿ ಹೊಸ ಶಕ್ತಿಯನ್ನು ಹುಟ್ಟುಹಾಕುತ್ತದೆ. ಆಕೆಯ ಕಥೆಗಳನ್ನು ಅಧ್ಯಯನ ಮಾಡಲು ಬಯಸುವವರಿಗೆ ಅನುಕೂಲವಾಗುವಂತೆ ಆಡಿಯೋ ಸಿಡಿಯು ಪಠ್ಯ ರೂಪದಲ್ಲಿ ಪುಸ್ತಕವನ್ನು ಸಹ ಹೊಂದಿದೆ. ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಅನೇಕ ವಿದ್ಯಾರ್ಥಿಗಳು ಅಧ್ಯಯನದ ವಿಷಯವಾಗಿ ತೆಗೆದುಕೊಳ್ಳುತ್ತಾರೆ.
Interested readers may write to us at mup@manipal.edu about purchasing the book.
Also available on

-
Phedra
₹180.00Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
-
Daddal Kaadina Mouna
₹240.00Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Dodda Samagara Nalmoga
₹350.00Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Udupi – Manipal: A Pictorial Journey
₹650.00Author: Astro Mohan
This picturesque book celebrates the history and life of Udupi and Manipal and takes the reader on a photographic tour. Most breath-taking locales are presented with rich, full-colour images taken by Astro Mohan. These images, combined with redolent text, in both English and Kannada, illustrates a plethora of visual wonders: ancient megaliths, scenic islands, magnificent artwork, white-sand seashores, rainforests, and both classic and innovative architecture. Loaded with information for each location, it is the perfect travel partner and comprehensive guide for an enriching and authentic travel experience in Udupi-Manipal. Experience well-known festivals such as Ganesh Chaturthi to lesser-known cultural fiestas like Bhootharadhane and Dollu Kunita or architectural wonders like the Kalluchappara or Katale Basadi with this. Immerse yourself in the temple city of Udupi and the cosmopolitan town of Manipal with this book. Begin your journey now!
Interested customers may write to us at mup@manipal.edu about purchasing the book.
Also available on
















