Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Also available on |
| Categories: | Indian Regional Languages, Kannada |
|---|
| Format |
|---|
Related products
-
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Bhashantara Jijnase, Pratyakshike
₹395.00Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on

-
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
Puttakkana Highway
₹350.00ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
-
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Sangita Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
















Be the first to review “Sangeetashastragranthachandrike Volume-2”
You must be logged in to post a review.