Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Also available on |
| Categories: | Indian Regional Languages, Kannada |
|---|
| Format |
|---|
Related products
-
Ati Sannakathe: Swarupa, Siddhi Mattu Sadhyate
₹160.00Author: T P Ashoka
ಕಲ್ಪನೆ ಎಂಬುದು ಸತ್ಯಕ್ಕಿಂತ ಹೆಚ್ಚು ಸತ್ಯ, ಕನಸು ಎಂಬುದು ವಾಸ್ತವಕ್ಕಿಂತ ಹೆಚ್ಚು ವಾಸ್ತವ ಎಂಬುದು ಅತಿ ಸಣ್ಣಕತೆಗಳು ನಮಗೆ ಮನದಟ್ಟು ಮಾಡಿಕೊಡುವಂತೆ ಕಾಣುತ್ತವೆ. ಹೆಚ್ಚಿನ ಅತಿ ಸಣ್ಣಕತೆಗಳು ವಾಸ್ತವವಾದೀ ಮಾರ್ಗವನ್ನು ಬಿಟ್ಟುಕೊಟ್ಟಿರುವುದಕ್ಕೆ ಪ್ರಾಯಶಃ ಇದೇ ಕಾರಣ. ವಿವರಣೆ-ವರ್ಣನೆಗಳ ಹಂಗು ಇಲ್ಲದಿರುವುದರಿಂದ ಸಂಕ್ಷಿಪ್ತತೆ ಮತ್ತು ಸಾಂದ್ರತೆಗಳು ಇವುಗಳ ಸಹಜ ಲಕ್ಷಣಗಳಾಗಿವೆ. ಅಂತರಂಗದ ಆಳವನ್ನು, ಅಮೂರ್ತವನ್ನು, ಸಾಂಕೇತಿಕವಾದುದದ್ದನ್ನು ಮತ್ತೊಂದೇ ಸ್ತರದಲ್ಲಿ ಗ್ರಹಿಸಿ ಅಭಿವ್ಯಕ್ತಿಸಲು ಲೇಖಕರಿಗೆ ಈ ಪ್ರಕಾರ ಹೇಳಿ ಮಾಡಿಸಿದಂತಿದೆ. ಹಾಗಾಗಿ ಜಗತ್ತಿನ ಎಲ್ಲ ಭಾಷೆಗಳ ದೊಡ್ಡ ಲೇಖಕರು, ದೀರ್ಘವಾದ ಕತೆ-ಕಾದಂಬರಿಗಳನ್ನು ಬರೆದವರನ್ನೂ ಸೇರಿಸಿಕೊಂಡು, ಈ ಪ್ರಕಾರದಲ್ಲಿ ಕೃಷಿಮಾಡಿದ್ದಾರೆ. ತುಂಬ ಸೂಕ್ಷ್ಮವಾದ, ನಾಜೂಕಾದ ಸಂಗತಿಗಳನ್ನು ಸೂಚ್ಯವಾಗಿ, ಕೆಲವೊಮ್ಮೆ ಪರೋಕ್ಷವಾಗಿ, ಇನ್ನೂ ಕೆಲವು ವೇಳೆ ಮುಚ್ಚಿಟ್ಟು ಹೇಳಲು ಈ ಪ್ರಕಾರವು ತನ್ನ ಸ್ವರೂಪದ ಕಾರಣದಿಂದಲೇ ಅನುವು ಮಾಡಿಕೊಡುತ್ತದೆ. ಇದು ಆಧುನಿಕ ಪೂರ್ವದ ದಂತಕತೆ, ನೀತಿಕತೆ, ದೃಷ್ಟಾಂತ ಕತೆಗಳ ಆಧುನಿಕ ರೂಪವಾಗಿ ಕಂಡರೂ ಆಶ್ಚರ್ಯವಿಲ್ಲ.”
Interested readers may write to us at mup@manipal.edu about purchasing the book.
Also available on

eBook available on

-
Madhavi Kathana Kavya
₹195.00Author: ONV Kurup, Translator: Parvathi G Aithal
ವ್ಯಾಸ ಮಹಾಭಾರತದ ಉದ್ಯೋಗ ಪರ್ವದಲ್ಲಿ ಬರುವ ಒಂದು ಉಪಾಖ್ಯಾನವನ್ನಾಧರಿಸಿ ಬರೆದ ಒಂದು ಕಾವ್ಯವಿದು. ಮೂಲಕಥೆಯಲ್ಲಿ ಮಾಧವಿಯ ಶೋಷಣೆ ಎದ್ದು ಕಾಣುವುದಿಲ್ಲ. ವಿಶ್ವಾಮಿತ್ರ ಶಿಷ್ಯನಾದ ಗಾಲವನು ತನ್ನ ವಿದ್ಯಾಭ್ಯಾಸವನ್ನು ಮುಗಿಸಿ ಹೊರಡುವಾಗ ‘ಗುರುದಕ್ಷಿಣೆಯಾಗಿ ಏನನ್ನು ಕೊಡಲಿ?’ ಎಂದು ಕೇಳುತ್ತಾನೆ. ವಿಶ್ವಾಮಿತ್ರರು ಗುರುದಕ್ಷಿಣೆ ಬೇಡವೆಂದರೂ ಕೇಳುವುದಿಲ್ಲ. ಕೊನೆಗೆ ವಿಶ್ವಾಮಿತ್ರರು, ‘ಒಂದು ಕಿವಿ ಮಾತ್ರ ಕಪ್ಪಾಗಿರುವ ಎಂಟುನೂರು ಶ್ವೇತಾಶ್ವಗಳನ್ನು ಕಾಣಿಕೆಯಾಗಿ ತೆಗೆದುಕೊಂಡು ಬಾ’ ಎಂದು ಹೇಳುತ್ತಾರೆ. ಆದರೆ, ಅಂಥ ವಿಶೇಷ ಗುಣದ ಕುದುರೆಗಳು ಬಹಳ ದುರ್ಲಭವಾದುವೆಂಬುದನ್ನು ಅರಿತಾಗ ಗಾಲವ ದಾನಶೂರ ಯಯಾತಿ ಮಹಾರಾಜನ ಬಳಿ ಸಹಾಯ ಬೇಡಲು ಹೋಗುತ್ತಾನೆ. ಆಗಷ್ಟೇ ದೊಡ್ಡದೊಂದು ಯಾಗ ಮುಗಿಸಿದ ಯಯಾತಿಯ ಬಳಿ ಅಶ್ವಗಳಿಲ್ಲ. ಆದರೆ, ತನ್ನ ಪ್ರತಿಷ್ಠೆಯನ್ನು ಉಳಿಸಿಕೊಳ್ಳುವುದಕ್ಕೋಸ್ಕರ ಯಯಾತಿ ತನ್ನ ಮಗಳು ಮಾಧವಿಯನ್ನು ಗಾಲವನ ವಶಕ್ಕೆ ಬಿಟ್ಟು ‘ರೂಪಸಿಯಾದ ಈಕೆಯನ್ನು ಬೇಕಾದ ಹಾಗೆ ಬಳಸಿಕೊಂಡು ನಿನಗೆ ಬೇಕಾದ ಅಶ್ವಗಳನ್ನು ಪಡೆ’ ಅನ್ನುತ್ತಾನೆ. ಹಾಗೆ ಗಾಲವನು ಮಾಧವಿಯನ್ನು ಮೂರು ಮಂದಿ ರಾಜರ ಬಳಿಗೆ ಕರೆದೊಯ್ದು ಅವರಿಂದ ತಲಾ ಇನ್ನೂರು ಅಶ್ವಗಳನ್ನು ಪಡೆದು ಆ ರಾಜರುಗಳಿಗೆ ಒಂದು ವರ್ಷದ ಮಟ್ಟಿಗೆ ಉಪಯೋಗಿಸಿಕೊಳ್ಳಲು ಮಾಧವಿಯನ್ನು ಒಪ್ಪಿಸುತ್ತಾನೆ. ಮೂಲ ಕಥೆಯಲ್ಲಿ ಮಾಧವಿಯ ಮನಸ್ಸಿನ ಸಂಘರ್ಷಗಳು ವ್ಯಕ್ತವಾಗಿಲ್ಲ. ‘ಪುರುಷರಿಂದ ಲೈಂಗಿಕವಾಗಿ ಎಷ್ಟು ಸಾರಿ ಬಳಸಲ್ಪಟ್ಟರೂ ನನ್ನ ಕನ್ಯತ್ವ ಉಳಿಯುವಂಥ ವರ ನನಗಿದೆಯಾದ್ದರಿಂದ ನಾನು ನಿನಗೆ ಸಹಾಯ ಮಾಡಬಲ್ಲೆ’ ಎಂದು ಗಾಲವನ ಬಳಿ ಅವಳೇ ಹೇಳುತ್ತಾಳೆ . ಓಎನ್ವಿ ಕುರುಪ್ ಬರೆದ ಈ ಕೃತಿಯಲ್ಲಿ ಅವರು ಕೆಲವು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಇಲ್ಲಿ ಇಡೀ ಕಥೆಯನ್ನು ಪುರುಷರಿಂದ ಘೋರ ಅನ್ಯಾಯಕ್ಕೊಳಗಾಗಿ ಮಾನಸಿಕ ಯಾತನೆಯನ್ನು ಅನುಭವಿಸಿರಬಹುದಾದ ಮಾಧವಿಯ ದೃಷ್ಟಿಯಿಂದ ಬರೆಯಲಾಗಿದೆ. ಆದ್ದರಿಂದ ಇದರ ಸ್ತ್ರೀವಾದಿ ಓದು ಒಂದು ವಿಶಿಷ್ಟ ಅನುಭವವನ್ನು ನೀಡುತ್ತದೆ.ಮಲಯಾಳದ ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿ ಓಎನ್ವಿಕುರುಪ್ ಅವರ ‘ಸ್ವಯಂವರಂ’ ಎಂಬ ಖಂಡಕಾವ್ಯದ ಭಾವಾನುವಾದವಿದು. ಮಹಾಭಾರತದ `ಉದ್ಯೋಗ ಪರ್ವ’ ದಲ್ಲಿ ಬರುವ ಒಂದು ಉಪಾಖ್ಯಾನದಲ್ಲಿ ಪುರುಷ ವರ್ಗದಿಂದ ಘೋರವಾಗಿ ಶೋಷಣೆಗೊಳಗಾದ ಮಾಧವಿ ಈ ಕಥೆಯ ನಾಯಕಿಯಾಗಿದ್ದು ಇಡೀ ಕಾವ್ಯವೇ ಅವಳ ದೃಷ್ಟಿಕೋನದಿಂದ ರಚಿತವಾಗಿದ್ದರಿಂದ ಸ್ತ್ರೀವಾದಿ ಓದಿಗೆ ಒಳಪಡಿಸಲು ಅತ್ಯಂತ ಸೂಕ್ತವಾದ ಕೃತಿಯಿದು ಎಂದೆನ್ನಿಸಿ ಅನುವಾದಕಿ ಅದರ ಶೀರ್ಷಿಕೆಯನ್ನು ‘ಮಾಧವಿ ಕಥನ ಕಾವ್ಯ’ವೆಂದು ಬದಲಾಯಿಸಿದ್ದಾರೆ . ಇದನ್ನು ಓದಿದಾಗೆಲ್ಲ ರಾಮಾಯಣದ ಸೀತೆಯ ನೆನಪಾಗುತ್ತದೆ.
Interested customers may write to us at mup@manipal.edu about purchasing the book.
Also available on

-
Christa Shaka 1800 Ra Modalina Mysooru ithihaasa
₹295.00Author: D S Achuta Rao Translator: S Narendra Prasad
೧೮೦೦ ಕ್ರಿ. ಶ. ದ ಹಿಂದಿನ ಮೈಸೂರು ಇತಿಹಾಸವು ಪ್ರೊ. ಡಿ ಎಸ್ ಅಚ್ಯುತ ರಾವ್ ಅವರ ಜೀವನ ಮತ್ತು ಕೆಲಸದ ಬಗ್ಗೆ. ಮೈಸೂರು ಇತಿಹಾಸದ ಕುರಿತಾದ ಅವರ ಸಂಶೋಧನೆಯು 1940-65ರ ಅವಧಿಯಲ್ಲಿ ಅವರು ಪ್ರಕಟಿಸಿದ ಹತ್ತು ಸೂಚ್ಯಂಕ ಲೇಖನಗಳಿಂದ ಪ್ರತಿನಿಧಿಸುತ್ತದೆ. ಅವರು ಭಾರತದ ಇತಿಹಾಸ ಮತ್ತು ಅದರ ಅದ್ಭುತ ಭೂತಕಾಲವನ್ನು ಸಕ್ರಿಯವಾಗಿ ಜನಪ್ರಿಯಗೊಳಿಸಿದರು. ಮಹಾರಾಜಾಸ್ ಕಾಲೇಜ್ ಹಿಸ್ಟರಿ ಸೊಸೈಟಿ, ಭಾರತದ ವಸಾಹತು ಸಂಶೋಧಕರು ಮತ್ತು ಕನ್ನಡ ವಿಶ್ವಕೋಶದಲ್ಲಿ ಮೈಸೂರು ಸರ್ಕಾರದ ಉಪಕ್ರಮದಿಂದ ಭಾರತೀಯ ಇತಿಹಾಸದಲ್ಲಿ ಉಪಕ್ರಮಗಳನ್ನು ಪ್ರಸ್ತುತಪಡಿಸುವುದರಿಂದ ಅಂತಹ ಮೂರು ಲೇಖನಗಳನ್ನು ಸೇರಿಸಲಾಗಿದೆ. ಎರಡನೇ ಭಾಗದಲ್ಲಿ ಅವರ ಜೀವನಚರಿತ್ರೆಯಲ್ಲಿ, ಅವರ ವಿದ್ಯಾರ್ಥಿಗಳು ಮತ್ತು ಮಕ್ಕಳು ಶಿಕ್ಷಕ ಮತ್ತು ತಂದೆಯಾಗಿ ಅವರ ಜೀವನದ ಬಗ್ಗೆ ಬರೆದಿದ್ದಾರೆ, ಅವರ ಅವಧಿಯ ಸಂದರ್ಭವನ್ನು ಒದಗಿಸಿದ್ದಾರೆ. ಪುಸ್ತಕವು ಕಳೆದ ಶತಮಾನದ ಮಧ್ಯದಲ್ಲಿ ಇತಿಹಾಸ ಸಂಶೋಧನೆಗೆ ಆಸಕ್ತಿದಾಯಕ ವಿಂಡೋವನ್ನು ಪ್ರಸ್ತುತಪಡಿಸುತ್ತದೆ.
Interested readers may write to us at mup@manipal.edu about purchasing the book.
-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
MOMO
₹450.00Author: Michael Ende ,Translator: Jayashree Kasaravalli
The fantasy novel originally written in German and translated into English, has been enjoyed by millions of readers worldwide. It has now been translated into Kannada as well. The novel has a very unusual story about time. The story describes how people in the modern era use the time, and a girl named MOMO teaches how it should be used. Humans have stolen time from modern societies, and a little girl of mysterious origin brings it back. In today’s society, the story has timeless relevance.
ನಗರದ ಅಂಚಿನಲ್ಲಿ ಹಾಳುಬಿದ್ದಿದೆ ಒಂದು ಆಂಪಿ ಥೀಯೇಟರ್. ಅಲ್ಲಿರುವ ದಿಕ್ಕಿಲ್ಲದ ಪುಟ್ಟ ಹುಡುಗಿ ಮೊಮೊ. ಒಂದು ದಿನ ಬೂದು ಬಣ್ಣದ ಬಟ್ಟೆ ತೊಟ್ಟು ದುಷ್ಟರು ಸದ್ದಿಲ್ಲದೇ ಬಂದು ನಗರವನ್ನು ಆಕ್ರಮಿಸಿಕೊಳ್ಳುತ್ತಾರೆ. ಅವರನ್ನು ಹಿಮ್ಮೆಟ್ಟಿಸುವ ಶಕ್ತಿಯಿರುವುದು ಮೊಮೊಗೆ ಮಾತ್ರ. ಅವಳು ಪ್ರೊಫೆಸರ್ ಹೋರಾ ಮತ್ತು ಅವರಲ್ಲಿರುವ ವಿಚಿತ್ರ ಆಮೆಯ ನೆರವಿನಿಂದ ಕಾಲದ ಸರಹದ್ದುಗಳನ್ನು ದಾಟಿ ಆ ದುಷ್ಟರ ಒಳಸಂಚುಗಳನ್ನು ಬಯಲುಮಾಡುತ್ತಿದ್ದಾಳೆ. ‘ಮೊಮೊ’ ಕಾಲವನ್ನು ಕದಿಯುವವರ ಕಥೆಯಾಗಿರುವ ಜೊತೆಗೇ ಕದ್ದ ಕಾಲವನ್ನು ಮತ್ತೆ ಜನರಿಗೆ ತಂದುಕೊಡುವ ಒಂದು ಮಗುವಿನ ಸಾಹಸಮಯ ಕಥೆಯು ಆಗಿದೆ.
Interested customers may write to us at mup@manipal.edu about purchasing the book.
-
Mahila Mahabharatha
₹160.00Author: K Madhavan Translator: Abhilasha S
ಮಹಿಳಾ ಮಹಾಭಾರತ, ಇದು ಜೆಎನ್ಯು ದೆಹಲಿಯ ವಿಶ್ರಾಂತ ಪ್ರಾಧ್ಯಾಪಕರಾದ ಕೆ. ಮಾಧವನ್ ರಚಿಸಿದ ನಾಟಕ. ರಂಗ ನಿರ್ದೇಶಕರೂ ಆಗಿರುವ ಮಾಧವನ್ರನ್ನು ೧೯೯೪ರಲ್ಲಿ ಯೂನಿವರ್ಸಿಟಿ ದು ಕ್ವಿಬೀ ಎ ಮಾನ್ಟ್ರಿಯಲ್ ವಿಶ್ವವಿದ್ಯಾನಿಲಯ ತನ್ನ ವಿದ್ಯಾರ್ಥಿಗಳಿಗೆ ರಂಗ ನಿರ್ದೇಶನದ ತರಬೇತಿ ನೀಡಲು ಆಹ್ವಾನಿಸಿತ್ತು. ಆಗ ಒಂದು ವರ್ಷ ನಡೆಸಿದ ರಂಗ ಕಾರ್ಯಾಗಾರದ ಭಾಗವಾಗಿ ೧೯೯೫ ರಲ್ಲಿ ಮಾಧವನ್ ಈ ನಾಟಕವನ್ನು ಫ್ರೆಂಚ್ ಭಾಷೆಯಲ್ಲಿ ರಚಿಸಿ ನಿರ್ದೇಶಿಸಿದ್ದರು. ನಂತರ ಇದು ಜರ್ಮನಿ, ಫ್ರಾನ್ಸ್, ಆಸ್ಟ್ರೇಲಿಯಾ ಮುಂತಾದ ದೇಶಗಳಲ್ಲಿ ಆಯಾ ಪ್ರದೇಶದ ಕಲಾವಿದರಿಂದ ಪ್ರದರ್ಶಿಸಲ್ಪಟ್ಟಿತು. ಹಾಗೆಯೇ ಭಾರತದಲ್ಲಿಯೂ ಅನೇಕ ನಗರಗಳಲ್ಲಿ ಈ ನಾಟಕ ಪ್ರದರ್ಶನ ಕಂಡಿದೆ. ೨೦೦೫ರಲ್ಲಿ ಈ ನಾಟಕದ ಇಂಗ್ಲಿಷ್ ಅವತರಣಿಕೆಯು ಥಿಯೇಟರ್ ಇಂಡಿಯಾದಿAದ ಪ್ರಕಟವಾಯಿತು. <br> ಎಲ್ಲ ಕಾಲದ ಮಹಿಳಾ ಜಗತ್ತಿನ ಆಂತರ್ಯದಲ್ಲಿ ನಡೆಯಬಹುದಾದ ಮಹಾಯುದ್ಧದ ಕಥನವೇ ಮಹಿಳಾ ಮಹಾಭಾರತ. ಇಲ್ಲಿ ಪುರಾಣ ಮತ್ತು ವಾಸ್ತವ ಜಗತ್ತಿನ ನಡುವಿನ ಗೆರೆಯೇ ಅಳಿಸಿ, ಪೌರಾಣಿಕತೆ ಮತ್ತು ವಾಸ್ತವಿಕತೆ ಮುಖಾಮುಖಿಯಾಗುತ್ತವೆ. ಮಹಾಭಾರತ ಕಥೆಯ ಪರಿಧಿಯಲ್ಲಿದ್ದಿರಬಹುದಾದ ಎಲ್ಲ ತಾಯಂದಿರೂ ಈ ನಾಟಕದಲ್ಲಿ ಕೇಂದ್ರದತ್ತ ಚಲಿಸಿ ಕತೆ ಹೇಳುತ್ತಾರಾದ್ದರಿಂದ, ಮಹಿಳಾ ಕಣ್ನೋಟದ ಮಹಾಭಾರತ ಇಲ್ಲಿ ಗೋಚರವಾಗುತ್ತದೆ. ವಿಶೇಷವೆಂದರೆ, ಈ ಇಡೀ ಕಥನದ ಸೂತ್ರಧಾರಿಣಿ, ಸಮಕಾಲೀನ ಜಗತ್ತಿನ ಅಸಹಾಯಕ, ಹತಾಶ ತಾಯಿ. ಇಲ್ಲಿ ಪುಟ್ಟ ಪೆಟ್ಟಿಗೆಯಲ್ಲಿ ಜೀವಶಕ್ತಿಯ ಬೀಜ ನೆಟ್ಟು ಅದು ಮೊಳಕೆಯೊಡೆದು ಬೃಹತ್ ವೃಕ್ಷವಾಗಿ ಅಡುಗೆ ಮನೆಯನ್ನೇ ಸ್ಪೋಟಿಸುವ ಹೆಣ್ಣುಗಳಿದ್ದಾರೆ, ಮರಕ್ಕೆ ಕಟ್ಟಿ ಸುಟ್ಟು ಹಾಕುತ್ತಿರುವ ಅಣ್ಣಂದಿರನ್ನೇ ನೋಡಿ ಗಹಗಹಿಸುವ ತಂಗಿಯರಿದ್ದಾರೆ, ಹೆಣ್ಣುಗಳ ನಿಟ್ಟುಸಿರ ತಾಪಕ್ಕೆ ಗುರಿಯಾಗಿ ನಲುಗುತ್ತಿರುವ ಗಂಡುಮಕ್ಕಳ ಸಂಕಟ ಕಂಡು ಮರುಗುತ್ತಿರುವ ತಾಯಂದಿರಿದ್ದಾರೆ. ಆದಿಯಿಂದ ಅಂತ್ಯದವರೆಗೆ ತೂಗುವ ತೊಟ್ಟಿಲು, ಅನುರಣಿಸುವ ಜೋಗುಳದ ಜೊತೆಗೆ ಹೆಮ್ಮಕ್ಕಳು ನೀಡುವ ಶಾಪದ ಸರಮಾಲೆಯೂ ಇಲ್ಲಿದೆ.
Interested readers may write to us at mup@manipal.edu about purchasing the book.
Also available on

-
Aparichita
₹170.00Translator: Prakash Nayakತರ್ಕವಾಗಲೀ ವಿಜ್ಞಾನವಾಗಲೀ ಮೂಲತಃ ಯಾವ ಅರ್ಥವನ್ನೂ ಅಡಗಿಸಿಕೊಂಡಿರದ ಈ ಅಸಂಬದ್ಧ ಬದುಕನ್ನು ವಿವರಿಸಲಾರವು. ಆದರೆ, ಅದಕ್ಕಾಗಿ ಅತೀಂದ್ರಿಯ ಶಕ್ತಿಯೊಂದನ್ನು ನಂಬುವುದು `ತಾತ್ವಿಕ ಆತ್ಮಹತ್ಯೆ’. ಇಂತಹ ತಾತ್ವಿಕ ಅಥವಾ ದೈಹಿಕ ಆತ್ಮಹತ್ಯೆಗಳು ಜಗತ್ತಿನ ಅರ್ಥರಾಹಿತ್ಯಕ್ಕೆ ಉತ್ತರಗಳಲ್ಲ. ಅಸಂಬದ್ಧತೆಯನ್ನು ಗುರುತಿಸಿ ಬದುಕುವುದೊಂದೇ ಅದಕ್ಕಿರಬಹುದಾದ ಉತ್ತರ ಎಂದು ವ್ಯಾಖ್ಯಾನಿಸಿದ ಫ್ರೆಂಚ್ ಲೇಖಕ, ತತ್ವಜ್ಞಾನಿ ಮತ್ತು ಪತ್ರಕರ್ತ ಆಲ್ಬರ್ಟ್ ಕಮೂ ಬರೆದಿರುವುದು ಕೆಲವೇ ಕಾದಂಬರಿಗಳು ಮತ್ತು ಕೆಲವು ವ್ಯಾಖ್ಯಾನಗಳು. ಇಪ್ಪತ್ತನೆಯ ಶತಮಾನದ ಅತ್ಯಂತ ಪ್ರಭಾವಶಾಲಿ ಲೇಖಕರಲ್ಲಿ ಒಬ್ಬನಾದ ಅಲ್ಬರ್ಟ್ ಕಮೂನ ಸುಪ್ರಸಿದ್ದ ಕಾದಂಬರಿ “ದ ಸ್ಟ್ರೇಂಜರ್” ಕನ್ನಡವೂ ಸೇರಿದಂತೆ ವಿಶ್ವದ ಹಲವು ಭಾಷೆಗಳಲ್ಲಿ ಅನುವಾದಗೊಂಡು ಹಲವು ಪೀಳಿಗೆಗಳ ಓದುಗರನ್ನು ವಿವಿಧ ರೀತಿಗಳಲ್ಲಿ ಆಕರ್ಷಿಸುತ್ತ ಬಂದಿದೆ. ೧೯೪೨ರಲ್ಲಿ ಮೊದಲು ಪ್ರಕಟವಾದ ಈ ಫ್ರೆಂಚ್ ಕಾದಂಬರಿ ಕಳೆದ ಎಂಟು ದಶಕಗಳಲ್ಲಿ ಪಡೆದುಕೊಂಡಿರುವ ವಿಮರ್ಶಾತ್ಮಕ ಪ್ರತಿಕ್ರಿಯೆ- ಪ್ರತಿಸ್ಪಂದನೆಗಳೂ ವೈವಿಧ್ಯಮಯವಾಗಿವೆ. ಪ್ರತಿವೊಂದು ಪೀಳಿಗೆಯೂ ಈ ಕೃತಿಯನ್ನು ಹೊಸದಾಗಿ ಓದುತ್ತ, ಅನುವಾದಿಸಿಕೊಳ್ಳುತ್ತ, ವಿಮರ್ಶಿಸುತ್ತ, ಇಂಥ ಅನುವಾದಗಳ, ವ್ಯಾಖಾನಗಳ ಒಂದು ಪರಂಪರೆಯೇ ಸೃಷ್ಟಿಯಾಗಿದೆ. ಕನ್ನಡದಲ್ಲಿ ಈ ಮೊದಲೇ, ೧೯೭ ೦ರಲ್ಲಿ, “ಅನ್ಯ” ಎಂಬ ಹೆಸರಿನಲ್ಲಿ ಡಾ. ಡಿ. ಎ. ಶಂಕರ್ ಅವರಿಂದ ಅನುವಾದಗೊಂಡಿದ್ದ ಈ ಕಾದಂಬರಿಯು ಅರ್ಧ ಶತಮಾನದ ನಂತರ ಮತ್ತೆ “ಅಪರಿಚಿತ” ಎಂಬ ಹೆಸರಿನಿಂದ ಶ್ರೀ ಪ್ರಕಾಶ್ ನಾಯಕ್ ಅವರಿಂದ ಹೊಸದಾಗಿ ಅನುವಾದಗೊಂಡು ಈ ಪರಂಪರೆಯನ್ನು ಮುಂದುವರಿಸಿದೆ. ಸ್ವತಃ ಓರ್ವ ಪ್ರತಿಭಾವಂತ ಕತೆಗಾರ-ಕಾದಂಬರಿಕಾರರಾಗಿರುವ ಪ್ರಕಾಶ್ ನಾಯಕ್ ಅವರ ಈ ಸರಳ ಸುಂದರ ಅನುವಾದವು ಕಮೂ ಕೃತಿಯ ಮರು ಓದು-ಹೊಸ ಓದುಗರನ್ನು ಆಹ್ವಾನಿಸುವಂತಿದೆ.Interested customers may write to us at mup@manipal.edu about purchasing the book.
Also available on

-
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on

















Be the first to review “Sangeetashastragranthachandrike Volume-2”
You must be logged in to post a review.