Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Categories: | Indian Regional Languages, Kannada |
|---|
Related products
-
Wodeyara Kaalada Mysurina Adalitha matthu Saamajika Ithihasa
₹600.00Author: Pavamana R D, D S Achuta Rao
ವಿಜಯನಗರ ಸಾಮ್ರಾಜ್ಯದ ಉತ್ತರಾಧಿಕಾರಿಗಳೆಂದು ಹೆಸರಾಗಿರುವ ಮೈಸೂರಿನ ಒಡೆಯರು ಕರ್ನಾಟಕದ ಇತಿಹಾಸಕ್ಕೆ ನೀಡಿದ ಕೊಡುಗೆ ಅನನ್ಯವಾದುದು. ರಾಜಕೀಯ ರಂಗದಲ್ಲಿ ಮಾತ್ರವಲ್ಲದೆ, ಸಾಂಸ್ಕೃತಿಕ, ಸಾಹಿತ್ಯಿಕ ಹಾಗೂ ಕಲಾರಂಗಗಳಲ್ಲೂ ಮೈಸೂರು ಅರಸರು ವಿಜಯನಗರದ ಶ್ರೇಷ್ಠ ಪರಂಪರೆಯನ್ನು ಮುಂದುವರೆಸಿದರು. ರಾಜಒಡೆಯರ್, ರಣಧೀರ ಕಂಠೀರವ, ಚಿಕ್ಕದೇವರಾಜ ಒಡೆಯರ್ ಅವರ ಆಳ್ವಿಕೆಯ ಕಾಲಘಟ್ಟದಲ್ಲಿ ಮೈಸೂರು ಸರ್ವಾಂಗೀಣ ಪ್ರಗತಿ ಸಾಧಿಸಿತು. ಈ ವಂಶದ ಮೊದಲ ಪ್ರಮುಖ ಅರಸು ರಾಜ ಒಡೆಯರ್ರಿಂದ ಆರಂಭಿಸಿ ಮೈಸೂರು ಆಂಗ್ಲರ ಅಧೀನವಾಗುವವರೆಗಿನ ಆಡಳಿತ ಹಾಗೂ ಸಾಮಾಜಿಕ ಇತಿಹಾಸ ಇಲ್ಲಿದೆ. ಮೈಸೂರು ಸಂಸ್ಥಾನದ ಎರಡು ಮಹತ್ವಪೂರ್ಣ ಶತಮಾನಗಳ ಕಾಲದ ಆಡಳಿತ, ಕಂದಾಯ ನೀತಿಗಳು, ನ್ಯಾಯಾಡಳಿತ, ಸೈನ್ಯ ವ್ಯವಸ್ಥೆ, ಪ್ರಾಂತೀಯ ಹಾಗೂ ಸ್ಥಳೀಯ ಆಡಳಿತ, ಸಾಮಾಜಿಕ ಜೀವನ ಹಾಗೂ ಧರ್ಮ, ಶಿಕ್ಷಣ, ಸಾಹಿತ್ಯ, ಕಲೆ ಮತ್ತು ವಾಸ್ತುಶಿಲ್ಪ ಮತ್ತು ಆಸ್ಥಾನ ಸಂಸ್ಕೃತಿ ಹೀಗೆ ಬಹುಮುಖೀ ನೆಲೆಗಳ ವಿಸ್ತಾರವಾದ, ಅಧ್ಯಯನಪೂರ್ಣ ಸಂಶೋಧನಾ ವರದಿಯಾಗಿ ಇದು ಸ್ವಾತಂತ್ರೋತ್ತರ ತಲೆಮಾರಿನ ವಿದ್ವಾಂಸರ ಸಂಶೋಧನಾ ವೈಖರಿಗೆ ಒಂದು ಅತ್ಯುತ್ತಮ ಉದಾಹರಣೆ ಎನ್ನಬಹುದು. ಕರ್ನಾಟಕದ ಅದರಲ್ಲೂ ಮೈಸೂರಿನ ಒಡೆಯರ ಇತಿಹಾಸದ ಬಗೆಗೆ ಸಂಶೋಧನೆಗಳು ಇನ್ನೂ ಕಣ್ತೆರೆಯುತ್ತಿದ್ದ ಕಾಲದಲ್ಲಿ ಡಿ. ಎಸ್. ಅಚ್ಯುತರಾಯರ ಈ ಸಂಶೋಧನ ಕಾರ್ಯ ಮಹತ್ವಪೂರ್ಣವಾದುದು. ಅಂದಿಗೆ ಲಭ್ಯವಿದ್ದ ಎಲ್ಲಾ ಬಗೆಯ ಮೂಲ ಹಾಗೂ ಆನುಷಂಗೀಕ ಆಕರಗಳನ್ನು ಬಳಸಿಕೊಂಡು, ಸಂಶೋಧನೆಯ ಎಲ್ಲಾ ಚೌಕಟ್ಟಿನೊಳಗೆ ವಸ್ತುನಿಷ್ಠವಾಗಿ ರೂಫುಗೊಂಡಿದೆ ಈ ಕೃತಿ. ಸಾಮಾಜಿಕ ಇತಿಹಾಸವನ್ನು ಪುನರ್ ರೂಪಿಸುವಾಗಲಂತೂ ಸಮಕಾಲೀನ ಸಾಹಿತ್ಯದ ಎಲ್ಲಾ ರೂಪಗಳನ್ನೂ ಇಲ್ಲಿ ಬಳಸಿಕೊಳ್ಳಲಾಗಿದೆ. ಅಗತ್ಯ ವಿರುವೆಡೆಯಲ್ಲಿ ಒಂದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿನ ಉಲ್ಲೇಖಗಳು, ಟಿಪ್ಪಣಿಗಳೂ, ವಿವರಣೆಗಳೂ ಈ ಸಂಶೋಧನೆಯ ಮೌಲ್ಯವನ್ನು ಹೆಚ್ಚಿಸಿವೆ. ಸಂಶೋಧನೆಗೆ ಪೂರಕವಾಗಿ ಗ್ರಂಥಋಣ, ನಕ್ಷೆಗಳು, ಸಂಕ್ಷೇಪಾಕ್ಷರಗಳು ಹಾಗೂ ಒಡೆಯರ ವಂಶಾವಳಿ ನೀಡಲಾಗಿದೆ. ಆಧಾರಗಳ ಮೇಲಿನ ಟಿಪ್ಪಣಿಯು ಸಂಶೋಧಕರಿಗೆ ತಮ್ಮ ಕಾರ್ಯಕ್ಷೇತ್ರದ ಮೇಲಿನ ಒಡೆತನದ ದ್ಯೋತಕ. ಅಪಾರ ಸಂಖ್ಯೆಯ ಹಸ್ತಪ್ರತಿಗಳ ಮತ್ತು ಶಾಸನಗಳ ಬಳಕೆ ಈ ಕೃತಿಯ ಹೆಗ್ಗಳಿಕೆ.
Interested readers may write to us at mup@manipal.edu about purchasing the book.
-
Daddal Kaadina Mouna
₹240.00Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
Phedra
₹180.00Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
-
Gombi Maduvi
₹130.00Author: Revati Nadgir
ಉತ್ತರ ಕರ್ನಾಟಕದ ಸಂಸ್ಕೃತಿಗೆ ಕನ್ನಡಿ ಹಿಡಿಯುವ ಈ ಕೃತಿಯಲ್ಲಿ ಬಡ, ಮುಗ್ಧ ಹುಡುಗಿಯೊಬ್ಬಳ ಕನಸುಗಳು, ಮಾನವೀಯತೆಯನ್ನು ಮೆರೆಯುವ ಹಲವು ಪಾತ್ರಗಳ ನಡುವೆ ವಿಧಿಯ ಕೈವಾಡದಿಂದ ಚದುರಿ ಹೋಗುವ, ಅಂತಃಕರಣವನ್ನು ಕಲಕುವ ಚಿತ್ರಣವಿದೆ. ಸ್ಥಳೀಯ ನಂಬಿಕೆ-ಆಚರಣೆ, ಆಶೋತ್ತರಗಳನ್ನು ದಟ್ಟವಾಗಿ ಹೆಣೆದುಕೊಳ್ಳುತ್ತ ಒಂದು ಪುಟ್ಟ ವಿಶ್ವವನ್ನೇ ಈ ನಾಟಕ ಸೃಷ್ಟಿಸುತ್ತದೆ. ರೇವತಿ ನಾಡಗೀರ ಅವರ ಚೊಚ್ಚಲ ಕೃತಿಯಾದ ಇದರಲ್ಲಿ, ಅವರ ಸಹೃದಯತೆ, ಉತ್ತರ ಕರ್ನಾಟಕದ ಸಂಸ್ಕೃತಿಯ ಅನುಭವ ಎದ್ದು ಕಾಣುತ್ತದೆ.
Interested customers may write to us at mup@manipal.edu about purchasing the book.
Also available on

-
Bhashantara Jijnase, Pratyakshike
₹395.00Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on

-
Kempu Kanagile and Chitra
₹160.00Author: Rabindranath Tagore, Translator: Sudha Adukkala
ಕೆಂಪು ಕಣಗಿಲೆ: ಅದೆಂಥ ಗಾಢಾಂಧಕಾರವೇ ಇರಲಿ, ಪುಟ್ಟ ಹಣತೆಯೊಂದು ಅದನ್ನು ತೊಡೆಯಬಲ್ಲುದೆಂಬುದು ಸಾರ್ವಕಾಲಿಕ ಸತ್ಯ. ಅಂಥದೊAದು ಸಂಘರ್ಷದ ಕಥನವನ್ನು ಗುರುದೇವ ರವೀಂದ್ರರು ತಮ್ಮ ಈ ನಾಟಕದಲ್ಲಿ ಹೇಳಿದ್ದಾರೆ. ‘ಕೆಂಪು ಕಣಗಿಲೆ’ ತೆರೆದಿಡುವ ಕೌರ್ಯದ ಜಗತ್ತು ಇಂದು ಈ ಕಾಲಘಟ್ಟದಲ್ಲಿ ನಿಂತು ಬರೆದರೇನೋ ಎಂಬಷ್ಟು ತಾಜಾ ಆಗಿದೆ. ಇಲ್ಲಿಯ ರಂಜನ ಕೇವಲ ಒಂದು ಪಾತ್ರವಲ್ಲ; ನಾವೆಲ್ಲರೂ ನಮ್ಮೊಳಗೆ ತುಂಬಿಸಿಕೊಳ್ಳಬೇಕಾದ ಜೀವನ ಪ್ರೀತಿಯ ವಿವಿಧ ಆಯಾಮಗಳ ಪ್ರತಿನಿಧಿ. ಇಲ್ಲಿಯ ನಂದಿನಿ ಇಂದು ಜಗವ ಸಂತೈಸಬೇಕಾದ ತಾಯಿಹೃದಯದ ಪ್ರತೀಕವಾಗಿದ್ದಾಳೆ.
ಚಿತ್ರಾ: ಪೌರಾಣಿಕ ಕಥಾನಕವೊಂದರ ಪುನರ್ಲೇಖನದ ಈ ನಾಟಕವು ಹೆಣ್ಣು ಮತ್ತು ರಾಷ್ಟçವನ್ನು ಒಂದು ಸಂಕಥನವನ್ನಾಗಿ ಚರ್ಚಿಸುತ್ತದೆ. ಹೆಣ್ಣು-ಗಂಡಿನ ಘನತೆಯ ಬದುಕನ್ನು ಕನಸುವ ನಿರೂಪಣೆ ನಾವು ಕಟ್ಟಬೇಕಾಗಿರುವ ರಾಷ್ಟçದ ರೂಪುರೇಷೆಗಳನ್ನೂ ತನ್ನೊಳಗೆ ಆಡಕ ಮಾಡಿಕೊಂಡಿದೆ. ನಮ್ಮ ಅನನ್ಯತೆಯನ್ನು ಉಳಿಸಿಕೊಳ್ಳುತ್ತಲೇ ಇನ್ನೊಬ್ಬರೊಂದಿಗೆ ಸಹಬಾಳ್ವೆಯನ್ನು ನಡೆಸುವ ಬಗೆಯನ್ನು ಮಂಡಿಸುತ್ತದೆ. ತಾನು ಆರೋಪಿಸಿಕೊಂಡ ಕೃತಕ ತೆರೆಯನ್ನು ಸರಿಸುವ ಚಿತ್ರಾ ನಮ್ಮೊಳಗಿನ ಅರಿವಿಗೆ ತೊಡಕಾಗಿರುವ ಸಂಕುಚಿತತೆಯ ಪರದೆಯನ್ನೂ ಸರಿಸುತ್ತಾಳೆ.
Interested overseas readers may write to us at mup@manipal.edu about purchasing the book. -
Kannadadalli Patthyaparishkarana- Ondu Kaipidi
₹150.00Author: N T Bhat
ಸ್ವಾನುಭವವಷ್ಟನ್ನೇ ಬಂಡವಾಳವಾಗಿರಿಸಿಕೊಂಡು ತೊಡಗಿದ ಉದ್ಯಮ ಈ ಹೊತ್ತಗೆಯ ರಚನೆ. ಕನ್ನಡದಲ್ಲಿ ಕರಡಚ್ಚು ಪ್ರತಿಗಳನ್ನು ತಿದ್ದಿಕೊಟ್ಟ ಅನುಭವಗಳನ್ನು ತುಸು ವಿಸ್ತರಿಸಿ ಸಣ್ಣ ಕೈಪಿಡಿಯ ರೂಪದಲ್ಲಿ ತಂದರೆ ಒಳ್ಳೆಯದಲ್ಲವೇ ಎಂಬ ಆಲೋಚನೆ ಈ ಕಿರುಹೊತ್ತಗೆಯ ರಚನೆಯ ಮೂಲ. -ಎನ್. – ತಿರುಮಲೇಶ್ವರ ಭಟ್ಟ ಡಾ. ತಿರುಮಲೇಶ್ವರ ಭಟ್ಟರು ದೀರ್ಘಕಾಲ ಅನುವಾದಕ್ಷೇತ್ರದಲ್ಲಿ (ಇಂಗ್ಲಿಷ್ನಿಂದ ಕನ್ನಡಕ್ಕೆ, ಕನ್ನಡದಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಇಂಗ್ಲಿಷ್ಗೆ, ಜರ್ಮನ್ನಿಂದ ಕನ್ನಡಕ್ಕೆ) ದುಡಿದವರು ಮತ್ತು ವಿವಿಧ ರೀತಿಯ ಪುಸ್ತಕಗಳ ಯೋಜನೆ, ಸಂಯೋಜನೆ, ಪುನರ್ನಿರೂಪಣೆ, ಸಂಪಾದನೆ ಮೊದಲಾದ ಕೆಲಸಗಳನ್ನು ಮಾಡಿದವರು. ಈಯೆಲ್ಲ ಕೆಲಸಗಳಲ್ಲಿ ಸತತವಾಗಿ ಒಳಗೊಂಡಿರುವುದು ಕರಡಚ್ಚು ತಿದ್ದುವ ಕೆಲಸ. ಯಾವುದೇ ಕಾರ್ಯಕ್ರಮದಲ್ಲಿದ್ದರೂ ಅದರ ಎಡೆಯೆಡೆಯ ಬಿಡುವಿನಲ್ಲಿ ಒಂದಿಷ್ಟು ಕರಡಚ್ಚು ತಿದ್ದುವ ಕೆಲಸವನ್ನು ಸತತವಾಗಿ ಮಾಡುತ್ತಲೇ ಬಂದವರು. ಪಠ್ಯಪರಿಷ್ಕರಣದ ಹಲವು ಹಂತಗಳನ್ನು ಚೆನ್ನಾಗಿ ಬಲ್ಲ ಅವರು ತಮ್ಮಲ್ಲಿರುವ ಮಾಹಿತಿಯನ್ನೂ ಅನುಭವವನ್ನೂ ಕ್ರೋಡೀಕರಿಸಿ ಕನ್ನಡದಲ್ಲಿ ಪಠ್ಯಪರಿಷ್ಕರಣದ ಆವಶ್ಯಕತೆಯೇನೆಂಬುದು ಸರಳವಾಗಿ ಈ ಪುಸ್ತಕದಲ್ಲಿ ನಿರೂಪಿಸಿದ್ದಾರೆ. ಅವರಿಂದ ಭಾಷಾಕ್ಷೇತ್ರಕ್ಕೆ ಇನ್ನಷ್ಟು ಸೇವೆ ಸಲ್ಲಲಿ ಎಂಬುದು ಮನದಾಳದ ಆಶಯ. – ಪಾದೇಕಲ್ಲು ವಿಷ್ಣು ಭಟ್ಟ.
Interested readers may write to us at mup@manipal.edu about purchasing the book.
Also available on

-
Sangita Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.















