Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Also available on |
| Categories: | Indian Regional Languages, Kannada |
|---|
| Format |
|---|
Related products
-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Bhashantara Jijnase, Pratyakshike
₹395.00Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on

-
The Prince
₹199.00Author: K N Venkatasubba Rao
ಮೆಖೈವಲ್ಲಿ ನವೋದಯ ರಾಜತಾಂತ್ರಿಕ, ತತ್ವಜ್ಞಾನಿ, ಬರಹಗಾರ. ಇಟಲಿಯ ಫ್ಲಾರೆನ್ಸ್ ನಗರದ ಬಡಕುಟುಂಬದಲ್ಲಿ 1469ರಲ್ಲಿ ಜನಿಸಿದ ಮೆಖೈವಲ್ಲಿ ತನ್ನ 21ನೆಯ ವಯಸ್ಸಿನಲ್ಲಿ ಫ್ಲಾರೆಂಟೈನ್ ಪ್ರಾಂತ್ಯದ ರಾಜಕೀಯ ರಂಗ ಪ್ರವೇಶಿಸಿದ. ಫ್ಲಾರೆನ್ಸಿನ ಆಡಳಿತಕ್ಕೆ ಅಗತ್ಯ ಬೇಹುಗಾರಿಕೆ ಮಾಹಿತಿ ಒದಗಿಸುವುದು ಮೆಖೈವಲ್ಲಿಯ ಹೊಣೆಯಾಗಿತ್ತು. ಅಧಿಕಾರದ ಗಳಿಕೆ, ಬಳಕೆ ಮತ್ತು ರಕ್ಷಣೆಯ ನಿಟ್ಟಿನಲ್ಲಿ ಮನುಷ್ಯ ಪ್ರಪಂಚಕ್ಕೇ ಅನ್ವಯವಾಗಬಲ್ಲಂತಹ ಮಾರ್ಮಿಕವಾದ ಬೃಹತ್ ವಿನ್ಯಾಸ ಅವನೊಳಗೆ ರೂಪುಗೊಳ್ಳುತ್ತಿತ್ತು. ಈ ಸಂದರ್ಭದಲ್ಲೇ ಫ್ಲಾರೆನ್ಸ್ ಗಣರಾಜ್ಯ ಪತನಗೊಂಡಿತು. ರಾಜಕುಟುಂಬದ ವಿರುದ್ಧ ಪಿತೂರಿಯ ಆರೋಪಕ್ಕೆ ಗುರಿಯಾಗಿ ಮೆಖೈವಲ್ಲಿ ಅಧಿಕಾರಭ್ರಷ್ಟನಾಗಬೇಕಾಯಿತು. ತನ್ನ ಜೀವಿತದ ಮುಂದಿನ ದಿನಗಳನ್ನು ಬರವಣಿಗೆಗೆ ಮೀಸಲಿಟ್ಟಿದ್ದ ಮೆಖೈವಲ್ಲಿ ಐವತ್ತೆಂಟನೆಯ ವಯಸ್ಸಿನಲ್ಲಿ ಅಂದರೆ 1527ರಲ್ಲಿ ವಿಧಿವಶನಾದ. 1532ರಲ್ಲಿ ಅಚ್ಚು ಕಂಡ ಅವನ `ಪ್ರಿನ್ಸಿಪೆ’, ಇಂಗ್ಲಿಷಿನಲ್ಲಿ `ದ ಪ್ರಿನ್ಸ್ ‘ ಆಗಿ 1640ರಲ್ಲಿ ಅಧಿಕೃತವಾಗಿ ಪ್ರಕಟಗೊಂಡಿತ್ತು. ಯುರೋಪಿನ ವ್ಯಾಪ್ತಿಯೊಳಗೆಯೇ ಸಾಕಷ್ಟು ವದಂತಿಗಳಿಗೆ ಒಳಗಾಗಿದ್ದ `ಪ್ರಿನ್ಸಿಪೆ’, `ದ ಪ್ರಿನ್ಸ್ ‘ ಆಗಿ ಮೆಚ್ಚುಗೆ ಮತ್ತು ಟೀಕೆಗಳನ್ನು ಇಂದಿಗೂ ಎದುರಿಸುತ್ತಲೇ ಇದೆ. ಮೆಖೈವಲ್ಲಿ `ಆಧುನಿಕ ರಾಜತಂತ್ರದ ಜನಕ’ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ. ಅವನನ್ನು ಅರ್ಥಶಾಸ್ತ್ರದ ಕರ್ತೃ ಕೌಟಿಲ್ಯನೊಡನೆ ಹೋಲಿಸುವ ವಾಡಿಕೆ ಇದೆ. ಇದು ಎಷ್ಟು ಸಮಂಜಸ ಎಂಬುದರ ಬಗ್ಗೆಯೂ ಪ್ರಾಜ್ಞರ ನಡುವೆ ಜಿಜ್ಞಾಸೆಯಿದೆ.
Interested customers may write to us at mup@manipal.edu about purchasing the book.
Also available on

-
Puttakkana Highway
₹350.00ಪುಸ್ತಕವು ಮೂಲ ಕಥೆಯಿಂದ ಪ್ರಶಸ್ತಿ ವಿಜೇತ ದೃಶ್ಯ ಚಿಕಿತ್ಸೆಯಾಗಿ ಪರಿವರ್ತನೆಗೊಂಡ ಪ್ರಯಾಣದ ಬಗ್ಗೆ ಹೇಳುತ್ತದೆ ಮತ್ತು ನಂತರ ಸ್ಕ್ರಿಪ್ಟ್, ವಿಮರ್ಶೆಗಳು ಮತ್ತು ಚರ್ಚೆಗಳೊಂದಿಗೆ ಪದ ರೂಪಕ್ಕೆ ತಿರುಗುತ್ತದೆ. ಸಂಶೋಧಕರಿಗೆ, ಇದು ಪದಗಳಿಂದ ಸ್ಕ್ರಿಪ್ಟ್ಗೆ ದೃಶ್ಯಗಳಿಗೆ ಮತ್ತು ಪದಗಳಿಗೆ ಹಿಂತಿರುಗುವ ಪ್ರಯಾಣದ ಕಲಿಕೆಯ ಅನುಭವವನ್ನು ನೀಡುತ್ತದೆ. ಚಲನಚಿತ್ರ ರಸಿಕರಿಗೆ ಇದು ಕಥೆಯು ಚಲನಚಿತ್ರವಾಗಿ ಹೇಗೆ ಹೊರಹೊಮ್ಮುತ್ತದೆ ಎಂಬುದರ ರಿಂಗ್ಸೈಡ್ ನೋಟವನ್ನು ನೀಡುತ್ತದೆ. ಅರ್ಥಶಾಸ್ತ್ರಜ್ಞರು ಮತ್ತು ಮಾನವ ಕಾರ್ಯಕರ್ತರಿಗೆ, ಇದು ಅಭಿವೃದ್ಧಿಯ ಸಮಸ್ಯೆಗೆ ಹೊಸ ದೃಷ್ಟಿಕೋನವನ್ನು ನೀಡುತ್ತದೆ. ಈ ಪುಸ್ತಕದಲ್ಲಿ “ಪುಟ್ಟಕ್ಕನ ಹೈವೇ” ಚಲನಚಿತ್ರದ ಚಿತ್ರಕಥೆ ಮಾತ್ರವೇ ಅಲ್ಲದೆ , ಚಿತ್ರದ ಕುರಿತಂತೆ ಬಂದ ವಿಮರ್ಶೆಗಳು, ಚಿತ್ರವನ್ನು ಕುರಿತಂತೆ ನಡೆದ ಸಂವಾದದ ವಿವರಗಳು, ಚಿತ್ರದ ಡಿವಿಡಿ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಅವರ ಮೂಲಕಥೆ “ಪುಟ್ಟಕ್ಕನ ಮೆಡಿಕಲ್ ಕಾಲೇಜ್” ಸಹ ಇದೆ.
Interested readers may write to us at mup@manipal.edu about purchasing the book.
-
Tapaalu Mani
₹140.00Author: Rabhindranath Tagore, Translator: Mounesh Badiger
ರಾಷ್ಟ್ರಕವಿ ರವೀಂದ್ರನಾಥ ಠಾಕೂರರ ‘ಡಾಕ್ ಘರ್’ ಬಹಳ ಪ್ರಸಿದ್ಧ ನಾಟಕ. ಮಗುವಿನ ಮನೋದೈಹಿಕ ಸಾಧ್ಯತೆಗಳನ್ನು ಕಲೆಯ ಸೂಕ್ಷ್ಮಕಣ್ಣಿನಿಂದ ನೋಡುವ ಎರಡಂಕದ ಪುಟ್ಟ ನಾಟಕವಿದು. ಇದು ಸೃಷ್ಟಿಸುವ ಮಾಯಾವಾಸ್ತವ ಬಹಳ ಅಪರೂಪವಾದದ್ದು. ಇದರ ಮುಖ್ಯ ಪಾತ್ರ ಮಗುವೇ ಆಗಿದ್ದರೂ ಇದರ ವಸ್ತು ಮಕ್ಕಳಿಗಳಿಂತ ಹೆಚ್ಚಾಗಿ ದೊಡ್ಡವರಿಗೇ ಅನ್ವಯವಾಗುವಂತಿದೆ. ಮೌನೇಶ ಬಡಿಗೇರರು ಇದನ್ನು ಉತ್ತರಕರ್ನಾಟಕದ ಭಾಷೆಗೆ ತಂದು ಕನ್ನಡದ ನಾಟಕವೇ ಎನ್ನುವಷ್ಟು ರೂಪಾಂತರಿಸಿದ್ದಾರೆ. ಇದರ ಪ್ರಯೋಗದ ಹೊಸ ಹೊಸ ಸಾಧ್ಯತೆಗಳನ್ನು ಕನ್ನಡ ರಂಗಭೂಮಿ ಇನ್ನೂ ಶೋಧಿಸಬೇಕಿದೆ.
Interested readers may write to us at mup@manipal.edu about purchasing the book.
Also available on

-
Bhagavantana Kandammagalu
₹190.00Author: Susmita Bagchi, Translator: Madhavi S Bhandary
ಅನುಪೂರ್ವಾ ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಅಮೇರಿಕಾ ಬಿಟ್ಟು ಭಾರತಕ್ಕೆ ಬರಬೇಕಾಯಿತು. ಕಲಾಶಿಕ್ಷಕಿಯಾಗಿ ಅಲ್ಲವಳ ಜೀವನ ಸುವ್ಯವಸ್ಥಿತವಾಗಿ ಸಾಗುತ್ತಿತ್ತು. ಭಾರತಕ್ಕೆ ಹಿಂದಿರುಗಿದ ನಂತರ ಅವಳ ಬದುಕು ಆಮೂಲಾಗ್ರವಾಗಿ ಬದಲಾಯಿಸಬಹುದೆಂದು ಅವಳು ಕನಸು-ಮನಸಲ್ಲೂ ಎಣಿಸಿರಲಿಲ್ಲ. ಒಮ್ಮೆ ಅವಳ ಕಾಲೇಜಿನ ಗೆಳತಿಯೊಬ್ಬಳು ಸೆರೆಬ್ರಲ್ ಪಾಲ್ಸಿ (ಮೆದುಳಿನ ಲಕ್ವ)ಯಿಂದ ಬಳಲುತ್ತಿರುವ ಮಕ್ಕಳ ಶಾಲೆ ‘ಆಶಾಜ್ಯೋತಿ’ಯ ಪರಿಚಯ ಮಾಡಿಸಿದಳು. ಅಲ್ಲಿಯೇ ಸ್ವಲ್ಪಕಾಲ ಆರ್ಟ್ ಟೀಚರ್ ರೂಪದಲ್ಲಿ ಸ್ವಯಂಸೇವಕಿಯಾಗಿ ಕೆಲಸ ಮಾಡುವ ಅವಕಾಶವೂ ದೊರೆಯಿತು. ಚಿತ್ರಗಳನ್ನು ಬಿಡಿಸುವುದು ಹೇಗೆ, ಅದಕ್ಕೆ ಹೇಗೆ ಬಣ್ಣ ತುಂಬಬೇಕು ಇತ್ಯಾದಿ ವಿಷಯಗಳನ್ನು ಅಲ್ಲಿಯ ಮಕ್ಕಳಿಗೆ ಹೇಳಿಕೊಡಲಾರಂಭಿಸಿದಳು. ಆದರೆ ಆ ಮಕ್ಕಳು ಅವಳಿಗರಿವಿಲ್ಲದಂತೆ ಗೆಳೆತನದ, ಪ್ರೇಮದ, ನಗುವಿನ, ಎಲ್ಲಕ್ಕಿಂತಲೂ ಮಿಗಿಲಾಗಿ ರೋಗದೊಂದಿಗೆ ಹೋರಾಡುವ ಪಾಠ ಅರ್ಥಾತ್ ಬದುಕಿನ ವಾಸ್ತವಿಕತೆಯ ಪಾಠ ಕಲಿಸಬಹುದೆಂದು ಅವಳಿಗೇನು ಗೊತ್ತಿತ್ತು! ಹೊರಜಗತ್ತು ಅವರನ್ನು ಶಾರೀರಿಕ ಅಥವಾ ಮಾನಸಿಕ ದೃಷ್ಟಿಯಿಂದ ದುರ್ಬಲರೆಂದು ತಿಳಿದುಕೊಳ್ಳಲಿ! ಆದರೆ ಅವರ ಅಂತರಂಗದಲ್ಲಿ ಏನನ್ನಾದರೂ ಸಾಧಿಸಬೇಕೆಂಬ ಅಪಾರ ಕ್ಷಮತೆ ಅಡಗಿದೆ ಎಂಬುದು ಅವಳ ಅರಿವಿನ ಕ್ಷಿತಿಜವನ್ನೇ ವಿಸ್ತರಿಸಿತು. ಅನುಪೂರ್ವಾ ಮತ್ತಾರೂ ಅಲ್ಲ, ಸ್ವಯಂ ಲೇಖಕಿಯೇ! ಈ ಮಕ್ಕಳ ಅಂತರಂಗದ ಪುಟಗಳನ್ನು ಅತ್ಯಂತ ಹತ್ತಿರದಿಂದ ನೋಡಿದ್ದಾರೆ; ತಿಳಿದಿದ್ದಾರೆ; ಮತ್ತದನ್ನು ಶಬ್ದಗಳ ಮೂಲಕ ಕಾದಂಬರಿಯ ರೂಪದಲ್ಲಿ ಜೋಡಿಸಿದ್ದಾರೆ. ಈ ಒಂದು ರೋಚಕವಾದ ಕಥೆ ಒಡಿಯಾದಲ್ಲಿ ‘ದೇಬಶಿಶು’ವಾಗಿದ್ದುದು, ಅಜಯ್ ಪಟ್ನಾಯಕ್ರು ಅದನ್ನು ‘ದೇವಶಿಶು’ ವಾಗಿ ಹಿಂದಿಗೆ ಅನುವಾದಿಸಿದರು. ಆ ಹಿಂದಿ ಅನುವಾದವು ಜ್ಞಾನಪೀಠ ಪ್ರಕಾಶನದಿಂದ ಪ್ರಕಟಗೊಂಡಿದೆ. ಈ ಕೃತಿಯು ಬಿಕ್ರಮ್ ಕೆ. ದಾಸ್ರಿಂದ ‘Children of Better God’ ಎಂಬ ಹೆಸರಿನಲ್ಲಿ ಆಂಗ್ಲ ಭಾಷೆಗೂ ಅನುವಾದಗೊಂಡಿದೆ. ಇದೀಗ ‘ಭಗವಂತನ ಕಂದಮ್ಮಗಳು’ ರೂಪದಲ್ಲಿ ಕನ್ನಡದ ಓದುಗರ ಮುಂದಿದೆ.
Interested customers may write to us at mup@manipal.edu about purchasing the book.
Also available on

-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Phedra
₹180.00Translator: Madhava Chippalli
ರಾಸೀನ್ನ ಫೀದ್ರಾ ನಾಟಕವು ಪಾಶ್ಚಿಮಾತ್ಯ ನಾಟಕ ಸಾಹಿತ್ಯದಲ್ಲೇ ಒಂದು ಆಯಕಟ್ಟಿನ ಕೃತಿ. ಗ್ರೀಕ್ ಮತ್ತು ಎಲಿಜಬೆಥನ್ ನಾಟಕಗಳಲ್ಲಿ ಕಾಣಸಿಗದ ಹೊಸ ಬಗೆಯ ಮನೋಲೋಕವೊಂದನ್ನು ತನ್ನ ಪಾತ್ರಗಳಿಗೆ ಧಾರಣೆ ಮಾಡಿಸಿದ ಈ ನಾಟಕವು ಆ ಮೂಲಕವೇ ಈ ಪರಂಪರೆಯಲ್ಲಿ ಮನೋವಿಜ್ಞಾನಕ್ಕೆ ಒಂದು ಖಾಯಂ ಸ್ಥಾನವನ್ನು ಒದಗಿಸಿಕೊಟ್ಟಿತು. ಮುಂದೆ ಬಹುತೇಕ ಪಾಶ್ಚಿಮಾತ್ಯ ನಾಟಕಗಳು ಈ ಪರಂಪರೆಯನ್ನು ಮುಂದುವರಿಸಿದವು; ರಂಗಭೂಮಿಯಲ್ಲೂ ಮನೋಲೋಕವನ್ನು ಮುಂದಕ್ಕೆ ತರುವ ವಿಭಿನ್ನ ಪ್ರಯೋಗಗಳಿಗೆ ಈ ಪರಂಪರೆಯು ಚಾಲ್ತಿ ನೀಡಿತು. ಈ ಸಂಪ್ರದಾಯಕ್ಕೆ ವಿರೋಧಿಯಾದ ಫ್ರಾನ್ಸಿನ ಪ್ರಸಿದ್ಧ ರಂಗಕರ್ಮಿ ಆಂತೋನಿನ್ ಆರ್ತೋನ ಮಾತುಗಳನ್ನು ಕೇಳುವುದಾದರೆ, ಪಾಶ್ಚಿಮಾತ್ಯ ರಂಗಭೂಮಿಯಲ್ಲಿ ‘ಸೈಕಾಲಜಿಯ ದುರ್ಬೀಜ’ ಬಿತ್ತಿದ ಕೃತಿ ಇದು! ಹಾಗಿರುವುದರಿಂದ, ನಾವು ಈ ನಾಟಕವನ್ನು ಹೇಗೇ ಓದಲಿ, ಓದದೆ ಇದ್ದರೆ ಅಷ್ಟರ ಮಟ್ಟಿಗೆ ಪಾಶ್ಚಾತ್ಯ ನಾಟಕ ಸಂಪ್ರದಾಯದ ಅರಿವು ಅಪೂರ್ಣ. ಅಂಥ ಪ್ರಮುಖ ನಾಟಕವೊಂದು ಇನ್ನೂ ಕನ್ನಡಕ್ಕೆ ಬಾರದೆ ಉಳಿದಿತ್ತು; ಆ ಲೋಪವನ್ನು ಈ ಅನುವಾದವು ಸಮರ್ಥವಾಗಿಯೇ ತುಂಬಿಸಿದೆ. ಮೂಲದ ನಿಷ್ಠೆಯೊಂದಿಗೆ ಭಾಷಾಗಾಂಭೀರ್ಯ ಮತ್ತು ಮಾತಿನ ಸುಭಗತೆ ಎರಡನ್ನೂ ಒಟ್ಟಿಗೇ ಹಿಡಿಯಲು ಯತ್ನಿಸಿರುವ ಈ ಅನುವಾದವನ್ನು ನಾನು ತುಂಬು ಮನಸ್ಸಿನಿಂದ ಸ್ವಾಗತಿಸುತ್ತೇನೆ.
Interested readers may write to us at mup@manipal.edu about purchasing the book.
















Be the first to review “Sangeetashastragranthachandrike Volume-2”
You must be logged in to post a review.