Sangeetashastragranthachandrike Volume-2
₹650.00
Author: S Karthik
ಸಂಗೀತಶಾಸ್ತ್ರಗ್ರಂಥಚಂದ್ರಿಕೆ ಯ ಎರಡನೆಯ ಸಂಪುಟವು ಭಾರತೀಯ ಸಂಗೀತದ ಶಾಸ್ತ್ರಕಾರರು ಮತ್ತು ಶಾಸ್ತ್ರಗ್ರಂಥಗಳ ಚರಿತ್ರೆಯನ್ನು ಒಳಗೊಂಡ ಕೃತಿಯಾಗಿದೆ. ಇದರಲ್ಲಿ ಪ್ರಕಟಿತ, ಅಪ್ರಕಟಿತ, ಲಭ್ಯ, ಅಲಭ್ಯ ಶಾಸ್ತ್ರಗ್ರಂಥಗಳ ಬಗೆಗೆ ಮೂಲ ಆಕರಗಳನ್ನೇ ಆಮೂಲಾಗ್ರವಾಗಿ ಗಮನಿಸಿ, ವಿಶದವಾಗಿ ಪರಿಚಯ ಮಾಡಿಕೊಡಲಾಗಿದೆ. ಎಷ್ಟೋ ಜನ ಅಜ್ಞಾತಶಾಸ್ತ್ರಕಾರರು ಮತ್ತು ಶಾಸ್ತ್ರಕೃತಿಗಳ ಬಗೆಗೆ ಖಚಿತವಾದ ಮಾಹಿತಿ ಆಕರ ಸಾಮಗ್ರಿಯ ಸಹಿತ ಇಲ್ಲಿ ದೊರಕುತ್ತದೆ. ಕರ್ನಾಟಕ ಸಂಗೀತ ಎಂಬ ಹೆಸರು ಹೇಗೆ ಬಂತೆಂಬ ವಿಚಾರದಲ್ಲಿ ಸ್ಪಷ್ಟವಾದ ವಿವರಗಳು ಇಲ್ಲಿ ದಾಖಲಾಗಿವೆ. ಹಿಂದಿನ ಅಧ್ಯಯನಗಳಿಗಿಂತ ಹೆಚ್ಚು ವಸ್ತುನಿಷ್ಠ ಮಾಹಿತಿ ಇಲ್ಲಿ ದೊರಕುತ್ತದೆ. ಕ್ರಿ.ಶ.ಸು ೧೨೫೦-೧೪೦೦ರ ನಡುವಿನ ಅವಧಿಯಲ್ಲಿದ್ದ ಶಾಸ್ತ್ರಕಾರರು ಮತ್ತು ಆ ಅವಧಿಯಲ್ಲಿ ರಚಿತವಾಗಿರುವ ಶಾಸ್ತ್ರಗ್ರಂಥಗಳ ಬಗೆಗೆ ರಚಿತವಾಗಿರುವ ಈ ಕೃತಿಯ ದ್ವಿತೀಯ ಸಂಪುಟವು ಕನ್ನಡ ಭಾಷೆಯಲ್ಲಿ ರಚನೆಗೊಂಡಿರುವ ವಿರಳ ಅಪರೂಪದ ಕೃತಿಗಳಲ್ಲಿ ಒಂದಾಗಿದೆ.
Interested customers may write to us at mup@manipal.edu about purchasing the book.
| Categories: | Indian Regional Languages, Kannada |
|---|
Related products
-
Sangita Lokadrishti
₹295.00Author: Sumangala
ತಂದೆ-ಮಗಳ ಸುರಬಹಾರಿನ ಸಂಗೀತಬಂಧದ ಚಿತ್ರಣದಿಂದ ಆರಂಭಗೊಳ್ಳುವ ಈ ಕಿರುಕೃತಿಯು ಸಾಗರ ವೀಣೆ ರೂಪುಗೊಳಿಸಿದ ಇನ್ನೊಂದು ತಂದೆ-ಮಗಳ ಸಂಗೀತಬಂಧದ ಚಿತ್ರಣದೊಂದಿಗೆ ಮುಕ್ತಾಯವಾಗುತ್ತದೆ. ಇಲ್ಲಿ ನಾಲ್ವರು ಸಂಗೀತಗಾರರ ಬದುಕಿನ ಕೆಲವು ಸನ್ನಿವೇಶಗಳು, ಸಂಗೀತಪಯಣದಲ್ಲಿ ಅವರು ಸಾಗಿದ ಹಾದಿ, ಕಠಿಣ ಸಂದರ್ಭಗಳು, ಅವರ ಸಾಂಗೀತಿಕ ಮನೋಧರ್ಮ, ರಾಗರೂಪದ ಕುರಿತ ದೃಷ್ಟಿಕೋನ, ಇತ್ಯಾದಿ ಅಂಶಗಳ ಸ್ಥೂಲ ಚಿತ್ರಣವಿದೆ.
ಸುರಬಹಾರಿನ ದಂತಕಥೆಯೆಂದೇ ಹೇಳಬಹುದಾದ ವಿದುಷಿ ಅನ್ನಪೂರ್ಣಾ ದೇವಿಯವರ ಖಾಸಗಿ ಬದುಕು, ಏಕಾಂತ ನಿಗೂಢವೆನ್ನಿಸುವ ಹಾಗೆಯೇ ಮೈಹರ್ ಘರಾನೆಯ ಸ್ವರಸಂಪತ್ತನ್ನು ಶಿಷ್ಯರಿಗೆ ಧಾರೆಯೆರೆದು ಕಲಿಸುತ್ತ, ಹಲವರನ್ನು ಮೇರು ಕಲಾವಿದರಾಗಿ ರೂಪುಗೊಳಿಸಿದ ಬಗೆಯೂ ಅನನ್ಯ. ಕೃತಿಯಲ್ಲಿ ಚಿತ್ರಿಸಿದ ಇನ್ನುಳಿದ ಮೂವರು ಸಂಗೀತಗಾರರು ನಮ್ಮ ನೆರೆಯ ಪಾಕಿಸ್ತಾನದ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಇನ್ನಷ್ಟು ಸಮೃದ್ಧಗೊಳಿಸಿದವರು.
“ಏ ದಯ್ಯಾ… ಕಹಾಂ ಗಯೇ ವೇ ಲೋಗ್… ಬ್ರಿಜ ಕೆ ಬಸಯ್ಯಾ…”
ಮನುಷ್ಯರ ನಡುವೆ ಹತ್ತುಹಲವು ಬಗೆಯ ದ್ವೇಷದ ಗೋಡೆಗಳು ಎದ್ದು ನಿಂತಿರುವ ಇಂದಿನ ದಿನಮಾನದಲ್ಲಿ ಭಿನ್ನತೆಗಳಿದ್ದರೂ ಪರಸ್ಪರ ಸಂವಾದ ನಡೆಸುತ್ತಿದ್ದ ಆ ಜನರನ್ನು, ಆ ಕಾಲಘಟ್ಟವನ್ನು ಮತ್ತೆ ಕಂಡುಕೊಳ್ಳಲು ಬಹುಶಃ ಇಂತಹ ಸಂಗೀತಗಾರರ ಕೊರಳೊಳಗಿನ, ಬೆರಳೊಳಗಿನ ಸ್ವರಗಳೇ ನಮ್ಮ ಕೈಹಿಡಿದು ಮುನ್ನಡೆಸಬೇಕಿದೆ.
Interested readers may write to us at mup@manipal.edu about purchasing the book.
-
Nanna Parni Shaale
₹290.00Author: Thakur S Powdyel Translator: N T Bhat
ನನ್ನ ಪರ್ಣ ಶಾಲೆ ಠಾಕೂರ್ ಎಸ್ ಪಡೆಯಲು ಅವರು ಇಂಗ್ಲಿಷಿನಲ್ಲಿ ರಚಿಸಿದ ಪುಸ್ತಕದ ಕನ್ನಡ ಅನುವಾದ, ಭೂತಾನ್ ರಾಜ್ಯದಲ್ಲಿ ರಾಷ್ಟ್ರವ್ಯಾಪಿಯಾಗಿ ಅಳವಡಿಸಲಾದ ಶಿಕ್ಷಣ ಯೋಜನೆಯನ್ನು ಪೌಡಿಯಲ್ “ಮೈ ಗ್ರೀನ್ ಸ್ಕೂಲ್” ಎಂಬ ಹೆಸರಿನಲ್ಲಿ ವಿವರಿಸಿದ್ದಾರೆ. ಮೂಲದ ಇಂಗ್ಲಿಷ್ ಶೀರ್ಷಿಕೆ ಹೊಂದಿಕೊಳ್ಳುವಂತ ಈ ಅನುವಾದಕ್ಕೆ ಪರ್ಣ ಶಾಲೆ ಎಂಬ ಶೀರ್ಷಿಕೆಯನ್ನು ನೀಡಲಾಗಿದೆ. ವಿದ್ಯಾರ್ಥಿ ವ್ಯಕ್ತಿತ್ವ ವನ್ನು ಸರ್ವಾಂಗೀಣ ವಾಗಿ ರೂಪಿಸುವ ಉದಾತ್ತ ಧೈರ್ಯವನ್ನು ಶಿಕ್ಷಣವು ಹೊಂದಿರಬೇಕೆಂಬುದನ್ನು ಈ ಪುಸ್ತಕದಲ್ಲಿ ಗಂಭೀರವಾಗಿ ಪ್ರತಿ ಪಾದಿಸುತ್ತಾರೆ. ಮನುಷ್ಯನು ಪ್ರಕೃತಿಯೊಂದಿಗೆ ತಾದಾತ್ಮ್ಯ ಭಾವವನ್ನು ಹೊಂದಿಕೊಳ್ಳುವುದು ಸರ್ವಾಂಗೀಣ ವ್ಯಕ್ತಿತ್ವದಲ್ಲಿ ಆಂತರ್ಗತವಾಗಿದೆ. ಶಿಕ್ಷಣಕ್ಕೆ, ಶಿಕ್ಷಣ ಸಂಸ್ಥೆಗಳಿಗೆ ಈ ಲಕ್ಷ್ಯವೂ ಇರಬೇಕೆಂಬುದು ಸ್ವತಸ್ಸಿದ್ದ. ಈ ನಿಟ್ಟಿನಲ್ಲಿ ಉದಾತ್ತ ಶಿಕ್ಷಣ ನೀಡುವ ಶಾಲೆಯನ್ನು ಗ್ರೀನ್ ಸ್ಕೂಲ್ ಎಂದು ಕರೆಯುವುದು ಸರ್ವಥಾ ಸ ರಿ. ಅಂತೆಯೇ ಈ ಶಿಕ್ಷಣ ನೀತಿಯನ್ನು ಭಾರತದಲ್ಲೂ ವ್ಯಾಪಕವಾಗಿ ಅಳವಡಿಸುವುದು ಅಪೇಕ್ಷಣೀಯ.
Also available on

eBook available on

-
Chandrayana
₹280.00Author: Parvathi Pitagi
`ಚಂದ್ರಯಾನ’ ಒಂದು ಅಪೂರ್ವ ಮಾದರಿಯ ಕಾದಂಬರಿ. ಇದರಲ್ಲಿ ಫ್ಯಾಂಟಸಿ ಇದೆ, ಸಾಮಾಜಿಕತೆ ಇದೆ, ಸ್ತ್ರೀಪರ ಚಿಂತನೆ ಇದೆ, ರಾಜಕೀಯ ಇದೆ, ಎಲ್ಲವೂ ಇವೆೆ. ಇದರ ನಿರೂಪಣೆಯಲ್ಲಿಯೂ ಸರಳತೆ ಇದೆ, ಲಾಲಿತ್ಯ ಇದೆ. ಉತ್ತರಕರ್ನಾಟಕದ ಭಾಷಿಕ ಸೊಗಡು ಈ ಕಾದಂಬರಿಯನ್ನು ಅನನ್ಯವಾಗಿಸಿದೆ. ಇದನ್ನು ಓದುವುದೆಂದರೆ ರೋಚಕ ಲೋಕದಲ್ಲಿ ವಿಹರಿಸಿದಂತೆ.
ಕಥಾನಾಯಕಿ ರೋಹಿಣಿ ಚಿಕ್ಕಂದಿನಿAದಲೂ ಆಗಸ, ಆಕಾಶಕಾಯಗಳ ಬಗ್ಗೆ ಸಾಕಷ್ಟು ಕೌತುಕ ಹೊಂದಿರುತ್ತಾಳೆ. ಅದೇ ರೀತಿ ತಾನು ಬೆಳೆದಂತೆಲ್ಲ ಆಸಕ್ತಿ ಯನ್ನು ಬೆಳೆಸಿಕೊಳ್ಳುತ್ತಾ ಮುಂದೊAದು ದಿನ ಗಗನ ಯಾತ್ರೆ ಕೈಗೊಳ್ಳುವ ಕನಸುಹೊತ್ತು ಆ ದಿಕ್ಕಿನಲ್ಲಿ ಪ್ರಯತ್ನಿಸುತ್ತಾ ತನ್ನ ಓದನ್ನು ಮುಂದುವರೆಸುತ್ತಾಳೆ. ಆಕೆಯ ಬಾಲ್ಯದ ಗೆಳೆಯ ಚಂದ್ರಶೇಖರ ಹುಟ್ಟುರಾಜಕಾರಣಿ. ಚಿಕ್ಕಂದಿನಿAದಲೇ ಆಕೆಯನ್ನು ಬಯಸುತ್ತಿದ್ದ. ಆತ ಬೆಳೆದ ನಂತರ ಆಕೆಯನ್ನು ಮದುವೆಯಾಗಲು ಇಷ್ಟಪಡುತ್ತಾನೆ. ಆಕೆ ಗಗನ ಯಾತ್ರೆಗೆ ಆಯ್ಕೆಯಾದಲ್ಲಿ ತನಗೆ ದಕ್ಕುವುದಿಲ್ಲವೆಂದು ಮಂತ್ರಿಯಾದ ಆತ ಅಡ್ಡಗಾಲು ಹಾಕುತ್ತಾನೆ.ಎಲ್ಲ ಅಡೆತಡೆಗಳನ್ನು ಮೀರಿ ರೋಹಿಣಿ ಕೊನೆಗೂ ಯಶಸ್ವಿಯಾಗಿ ಉಪಗ್ರಹದ ಮೇಲಿಂದ ಸುಂದರ ಭಾರತವನ್ನು ಕಂಡು `ಸಾರೆ ಜಹಾಂಸೆ ಅಚ್ಛಾ’ ಎಂದು ಉದ್ಗರಿಸುತ್ತಾಳೆ.ಅದು ಇಡೀ ಕಾದಂಬರಿಯ ಭರತವಾಕ್ಯವೂ ಹೌದು.
Interested overseas readers may write to us at mup@manipal.edu about purchasing the book.
-
Dodda Samagara Nalmoga
₹350.00Author: Dinesh Uppoora
ದೊಡ್ಡ ಸಾಮಗರೆಂದೇ ಪ್ರಸಿದ್ಧರಾದ ಮಲ್ಪೆ ಶಂಕರನಾರಾಯಣ ಸಾಮಗರು ಬಹುಮುಖ ವ್ಯಕ್ತಿತ್ವವುಳ್ಳ ಒಬ್ಬ ಮಹಾನ್ ದಾರ್ಶನಿಕ. ಸ್ವಾತಂತ್ರ್ಯ ಹೋರಾಟಗಾರರಾಗಿ ಬ್ರಿಟಿಷರ ಆಡಳಿತದ ಧೋರಣೆಗಳ ವಿರುದ್ಧ ಹೋರಾಡಿ ಜೈಲುವಾಸ ಅನುಭವಿಸಿದವರು, ಹರಿಕಥಾದಾಸರಾಗಿ ತನ್ನ ವಿಚಾರಧಾರೆಯನ್ನು ಸಮಾಜಕ್ಕೆ ಪ್ರಚುರಪಡಿಸಿದವರು, ತನ್ನ ಪ್ರತ್ಯುತ್ಪನ್ನಮತಿತ್ವದಿಂದ, ಅಗಾಧವಾದ ಪಾಂಡಿತ್ಯದಿಂದ ತಾಳಮದ್ದಳೆ ಅರ್ಥಧಾರಿಗಳಾಗಿ ಕಲಾರಸಿಕರ ಮನಗೆದ್ದವರು. ಉತ್ತಮ ವೇಷಧಾರಿಗಳಾಗಿ ಬೇಡಿಕೆಯ ಕಲಾವಿದರಾದವರು, ಸರಳ ಜೀವನದ ಆದರ್ಶ ವ್ಯಕ್ತಿತ್ವದಿಂದ ಗಾಂಧಿವಾದಿಗಳಾಗಿ ಬದುಕಿದವರು. ಇವರು 1911 ರ ಡಿಸೆಂಬರ್ 11 ರಂದು ಜನಿಸಿ, 1999 ರ ಆಗಸ್ಟ್ 1 ರಂದು ನಿಧನರಾದರು.
ಅವರ ಜೀವನದ ಘಟನೆಗಳನ್ನು ಆಧರಿಸಿ ಬರೆದ “ದೊಡ್ಡ ಸಾಮಗರ ನಾಲ್ಮೊಗ”ವನ್ನು ದಿನೇಶ ಉಪ್ಪೂರರು ಹಲವಾರು ಗ್ರಂಥ, ಸ್ನೇಹಿತರು, ಅಂತರ್ಜಾಲ ಇತ್ಯಾದಿಗಳಿಂದ ಸಂಗ್ರಹಿಸಿ ಅನಾವರಣಗೊಳಿಸಿದ್ದಾರೆ.
Interested readers may write to us at mup@manipal.edu about purchasing the book.
-
Saamajika Samanvayada Harikara – Kanaka Dasaru
₹285.00Author: P R Panchamukhi
ಕನಕದಾಸರ ಜೀವನವೇ ಸಮನ್ವಯತೆಯ ಪ್ರತಿಬಿಂಬವಾಗಿತ್ತು. ಹುಟ್ಟಿದ್ದು ಕುರುಬರ ಮನೆತನದಲ್ಲಿ; ಬೆಳೆದದ್ದು ಸಂಸಾರದ ಜಂಜಾಟದ ರಾಜಕೀಯ ಪರಿಸರದಲ್ಲಿ; ಜೀವನದ ಕೊನೆ ಕೊನೆಗೆ ಒಡನಾಟವನ್ನಿಟ್ಟುಕೊಂಡದ್ದು ಬ್ರಾಹ್ಮಣರ ಪರಿಸರದಲ್ಲಿ, ಅಂತಿಮವಾಗಿದ್ದದ್ದು ದಾಸಭಾವದ ನೆಲೆಗಟ್ಟಿನಲ್ಲಿ. ಹೀಗಾಗಿ, ಅವರು ಒಂದು ನೆಲೆಯಲ್ಲಿ ತಮ್ಮ ಸಮಗ್ರ ಜೀವನವನ್ನು ನಡೆಸಲಿಲ್ಲ. ಆದರೆ, ಅವರಿಗಿದ್ದುದು ಸಾಧಕನ ನೆಲೆ. ಹುಟ್ಟಿದ್ದು ಬೆಳೆದಿದ್ದು ನಾಯಕನ ಕುಲದಲ್ಲಿ, ಜೀವನದ ಹರೆಯ ಹಾಗೂ ಕೊನೆಯ ಕಾಲದಲ್ಲಿ ದೇವರ ದಾಸನಾಗುವ ಲವಲವಿಕೆಯನ್ನು ಬೆಳೆಸಿಕೊಂಡಿದ್ದು; ದ್ವೇಷ, ಕ್ರೌರ್ಯಗಳ ದಟ್ಟಿ ನಿಂದ ಭಕ್ತಿಯ ಮೆಟ್ಟಿಲುಗಳೆಡೆಗೆ ಸಾಗಿದ್ದು. ಹೀಗೆ ಕನಕದಾಸರ ಜೀವನವು ಪರಸ್ಪರ ವಿರೋಧಗಳ ಬೀಡಾಗಿದ್ದರೂ ಅಂತರಂಗದಲ್ಲಿ ಅದು ಸಮನ್ವಯತೆಯ ನೆಲೆಯನ್ನು ಮೈಗೂಡಿಸಿ ಕೊಂಡಿತ್ತು. ಕನಕದಾಸರು ಸಮಗ್ರವಾದ ಸಮನ್ವಯ ದೃಷ್ಟಿಯ ಹರಿಕಾರರೆನಿಸಿದರು.
Interested readers may write to us at mup@manipal.edu about purchasing the book.
-
Daddal Kaadina Mouna
₹240.00Author: Shashiraj Kavoor
ದಡ್ಡಾಲ್ ಕಾಡಿನ ಮೌನ’ ಕಿರು ಕಾದಂಬರಿಯಲ್ಲಿ ಶಶಿರಾಜ್ ಅವರು ಕೊರಗ ಸಮುದಾಯದ ಬಗ್ಗೆ ಸಾಕಷ್ಟು ಕ್ಷೇತ್ರಕಾರ್ಯದ ಅಧ್ಯಯನ ನಡೆಸಿ, ಆಧುನಿಕತೆಯ ಸಂಕ್ರಮಣಕಾಲದಲ್ಲಿನ ಕೊರಗರ ಬದುಕಿನ ಸಂಗತಿಗಳನ್ನು ಸಾಂಸ್ಕೃತಿಕ ನೆಲೆಯಲ್ಲಿ ನೋಡಲು ಪ್ರಯತ್ನಿಸಿದ್ದಾರೆ. ಅದರ ಜೊತೆಗೆಯೇ ತುಳುವ ಸಂಸ್ಕೃತಿಯ ಗುತ್ತುವಿನಂತಹ ಪರಂಪರೆಯ ಆಡಳಿತದ ಚೌಕಟ್ಟಿನಲ್ಲಿ ನಡೆಯುತ್ತಿದ್ದ ದೈವಾರಾಧನೆಯ ಸ್ವರೂಪ ಮತ್ತು ಸಮಸ್ಯೆಗಳನ್ನು ಕೂಡಾ ಪೋಣಿಸಿದ್ದಾರೆ. ಕೆಲವು ದಶಕಗಳ ಹಿಂದೆ ತುಳುನಾಡಿನಲ್ಲಿ ನಡೆಯುತ್ತಿದ್ದಂತಹ ವಿದ್ಯಮಾನಗಳನ್ನು ಕುರಿತ ಕೆಲವು ಸೂಕ್ಷ್ಮ ನೋಟಗಳು ಇಲ್ಲಿನ ಕಥಾ ಸಂವಿಧಾನದಲ್ಲಿ ಸೇರಿಕೊಂಡಿವೆ. ಇನ್ನೊಂದು ಕಡೆ ಆಧುನಿಕ ವೈದ್ಯಕೀಯ ಪದ್ಧತಿಯು ಬಂದ ಬಳಿಕವೂ ದೇಸಿ ಪರಂಪರೆಯ ವೈದ್ಯಪದ್ಧತಿ ಮತ್ತು ನಂಬಿಕೆಗಳು ಕ್ರಿಯಾಶೀಲವಾಗಿ ಇರುವುದರ ವಾಸ್ತವದ ಚಿತ್ರಣವೂ ಅನಾವರಣವಾಗಿದೆ. ಒಂದು ವ್ಯವಸ್ಥೆಯ ಒಳಗಿನ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳು ಏಕಕಾಲಕ್ಕೆ ಕ್ರಿಯಾಶೀಲವಾಗಿ ಇರುವ ವೈರುಧ್ಯದ ಸಂಗತಿಗಳೂ ಇಲ್ಲಿ ಕಾಣಿಸುತ್ತವೆ. ಕೊರಗಸಮುದಾಯದ ಸಂಕೀರ್ಣ ಭಾವನೆಗಳ ತೊಳಲಾಟವನ್ನು ಇಲ್ಲಿ ಗ್ರಹಿಸಬಹುದು. ಕುಲಸಂಬಂಧಿ ಆಚರಣೆಗಳನ್ನು ಮಾಡುತ್ತಲೂ ಅವುಗಳಲ್ಲಿನ ಅಮಾನವೀಯ ಅಂಶಗಳನ್ನು ತೊಡೆದುಹಾಕುವ ಮನೋಧರ್ಮವು ಕಾದಂಬರಿಯ ಬೆಳವಣಿಗೆಯಲ್ಲಿ ಕಾಣಿಸುತ್ತದೆ.
Interested readers may write to us at mup@manipal.edu about purchasing the book.
-
Bhashantara Jijnase, Pratyakshike
₹395.00Author: N T Bhat
“ಭಾಷಾಂತರವೆಂದರೆ ಎರಡು ಭಾಷಿಕರ ನಡುವೆ ಸಂವಹನವನ್ನು ಏರ್ಪಡಿಸುವ ಕಾರ್ಯವಿಧಾನ. ಒಂದು ಭಾಷೆಯಲ್ಲಿ ಕಥಿಸಿದ್ದನ್ನು, ವಿವರಿಸಿದ್ದನ್ನು, ಸಂಭಾಷಿಸಿದ್ದನ್ನು, ಭಾವನೆಗಳನ್ನು ವ್ಯಕ್ತಪಡಿಸಿದ್ದನ್ನು, ವಿಶ್ಲೇಷಿಸಿದ್ದನ್ನು, ವರ್ಣಿಸಿದ್ದನ್ನು, ವಾದಿಸಿದ್ದನ್ನು ಅದಕ್ಕನುಗುಣವಾಗಿ ಇನ್ನೊಂದು ಭಾಷೆಗೆ ಪರಿವರ್ತಿಸುವುದು ಭಾಷಾಂತರವೆಂಬ ಪ್ರಕ್ರಿಯೆ. ಒಂದು ಭಾಷೆಯಲ್ಲಿರುವ ಭಾವಲಹರಿ, ವಿಚಾರಧಾರೆಗಳನ್ನು ಇನ್ನೊಂದು ಭಾಷೆಗೆ ಸ್ಥಳಾಂತರಮಾಡುವುದು ಭಾಷಾಂತರವೆಂದು ಸ್ಥೂಲವಾಗಿ ತಿಳಿದುಕೊಳ್ಳಬಹುದು.”
“ಪ್ರಪಂಚದ ಒಂದು ಮೂಲೆಯಲ್ಲಿ ಕಂಡುಕೊಂಡ ಹೊಸ ಸಿದ್ಧಾಂತಗಳು, ಆವಿಷ್ಕಾರಗಳು ಇನ್ನೊಂದು ಮೂಲೆಯ ಇನ್ನೊಂದು ಭಾಷೆಯನ್ನಾಡುವ ಜನರಿಗೆ ತಲುಪಿದಾಗ ಅವುಗಳ ಪ್ರಯೋಜನವನ್ನು ಪಡೆಯುವ ಜನರ ಸಂಖ್ಯೆ ಸ್ವಾಭಾವಿಕವಾಗಿಯೇ ಹೆಚ್ಚುತ್ತದೆ. ಪ್ರಪಂಚದಲ್ಲಿ ಹೆಚ್ಚು ಭಾಷೆಗಳನ್ನು ಕಲಿಸಿದಷ್ಟೂ ಭಾಷಾಂತರದ ಅಗತ್ಯ ಕೆಲವು ಸ್ತರಗಳಲ್ಲಿ ಕಡಿಮೆಯಾದೀತು. ಆದರೆ, ಅದರಿಂದಾಗಿ ಭಾಷಾಂತರಗಳಿಗೆ ಅವಕಾಶ ಹೆಚ್ಚುತ್ತಾ ಹೋಗುತ್ತದೆ.’’
– ನೀರ್ಕಜೆ ತಿರುಮಲೇಶ್ವರ ಭಟ್
Interested customers may write to us at mup@manipal.edu about purchasing the book.
Also available on

-
Udupi – Manipal: A Pictorial Journey
₹650.00Author: Astro Mohan
This picturesque book celebrates the history and life of Udupi and Manipal and takes the reader on a photographic tour. Most breath-taking locales are presented with rich, full-colour images taken by Astro Mohan. These images, combined with redolent text, in both English and Kannada, illustrates a plethora of visual wonders: ancient megaliths, scenic islands, magnificent artwork, white-sand seashores, rainforests, and both classic and innovative architecture. Loaded with information for each location, it is the perfect travel partner and comprehensive guide for an enriching and authentic travel experience in Udupi-Manipal. Experience well-known festivals such as Ganesh Chaturthi to lesser-known cultural fiestas like Bhootharadhane and Dollu Kunita or architectural wonders like the Kalluchappara or Katale Basadi with this. Immerse yourself in the temple city of Udupi and the cosmopolitan town of Manipal with this book. Begin your journey now!
Interested customers may write to us at mup@manipal.edu about purchasing the book.
Also available on
















